HEALTH TIPS

ಅನಂತ ಪದ್ಮನಾಭ ದೇಗುಲದಲ್ಲಿ ಆಕಸ್ಮಿಕವಾಗಿ ಗುಂಡು ಹಾರಿಸಿದ ಪೊಲೀಸ್‌ ಸಿಬ್ಬಂದಿ

ತಿರುವನಂತಪುರ: ಕೇರಳದ ಪ್ರಸಿದ್ದ ಅನಂತ ಪದ್ಮನಾಭ ದೇಗುಲದಲ್ಲಿ ಸ್ವಚ್ಛತೆ ಮಾಡುವಾಗ ಪೊಲೀಸ್‌ ಸಿಬ್ಬಂದಿಯೊಬ್ಬರು ಆಕಸ್ಮಿಕವಾಗಿ ಗುಂಡು ಹಾರಿಸಿದ ಘಟನೆ ಸೋಮವಾರ ನಡೆದಿದೆ. 

ದೇವಾಲಯದಲ್ಲಿ ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಯ ಶಸ್ತ್ರಾಸ್ತ್ರಗಳನ್ನು ಇಡಲಾಗಿದ್ದ ಕೋಣೆಯಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಅವಘಡ ಸಂಭವಿಸಿಲ್ಲ.

ಕರ್ತವ್ಯ ಮುಗಿಸಿದ ನಂತರ ಮತ್ತೊಬ್ಬ ಪೊಲೀಸ್ ಸಿಬ್ಬಂದಿಗೆ ಪಿಸ್ತೂಲ್‌ ಹಸ್ತಾಂತರ ಮಾಡಲು ಅದನ್ನು ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದ ಘಟನೆ ಜರುಗಿದೆ.

ಆಕಸ್ಮಿಕ ಗುಂಡು ಹಾರಾಟ ಎಂದು ಪ್ರಕರಣ ದಾಖಲಿಸಲಾಗಿದ್ದು, ಈ ಕುರಿತು ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries