ಕುಂಬಳೆ: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ಪ್ರತಿಭಾ ಭಾರತಿ ಕಾರ್ಯಕ್ರಮ ಮತ್ತು ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು. ಅತಿಥಿಗಳಾಗಿ ಆಗಮಿಸಿದ ಪುರುಷೋತ್ತಮ ಆಚಾರ್ಯ ಮುಜುಂಗಾವು ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, 'ಪ್ರತಿಭಾ ಭಾರತಿಯು ಪ್ರತಿಯೊಂದು ಮಗುವಿನ ಪ್ರತಿಭೆ ಹೊರತರುವ ವೇದಿಕೆ. ಪ್ರತಿಭಾ ಭಾರತಿಯಿಂದ ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ. ಜೊತೆಗೆ ಸಭಾ ಕಂಪನದಂತಹ ಸಮಸ್ಯೆಗಳು ಕಡಿಮೆಯಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.
ವಿದ್ಯಾಲಯದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಂದಲೂ ಪ್ರತಿಭಾ ಪ್ರದರ್ಶನ ನಡೆಯಿತು. 10ನೇ ತರಗತಿಯ ಅಕ್ಷರ ಬಲ್ಲಾಳ್ ಸಭಾಧ್ಯಕ್ಷತೆ ವಹಿಸಿ ಮಾತನಾಡಿದಳು. ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ, ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಬೆಮಾರ್ಗ, ಸಂಸ್ಕøತ ಅಧ್ಯಾಪಕ ಬಾಲಕೃಷ್ಣ ಶರ್ಮ ಅನಂತಪುರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕುಮಾರಿ ವೈಷ್ಣವಿ ಸ್ವಾಗತಿಸಿ, ಕುಮಾರಿ ಪ್ರತಿಕ್ಷ ವಂದಿಸಿದಳು. ಕುಮಾರಿ ಶ್ರೀದೇವಿ ಹಾಗೂ ಕುಮಾರಿ ಲಿಖಿತ ಕಾರ್ಯಕ್ರಮವನ್ನು ನಿರೂಪಿಸಿದರು.


.jpg)
