HEALTH TIPS

ತಿರುಪತಿ ದೇವಸ್ಥಾನಂ | ಹಿಂದೂಗಳಲ್ಲದ ನಾಲ್ವರು ನೌಕರರ ಅಮಾನತು ಮಾಡಿದ ಟಿಟಿಡಿ

ತಿರುಪತಿ: ಹಿಂದೂಗಳಲ್ಲದ ನಾಲ್ವರು ನೌಕರರನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಡಳಿತ ಮಂಡಳಿ ಅಮಾನತುಗೊಳಿಸಿದೆ.

ಡೆಪ್ಯೂಟಿ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ (ಗುಣಮಟ್ಟ ನಿಯಂತ್ರಕ) ಬಿ. ಎಲಿಜಾರ್‌, ಬಿಐಆರ್‌ಆರ್‌ಡಿ ಆಸ್ಪತ್ರೆಯ ಶುಶ್ರೂಷಕಿ ಎಸ್‌. ರೋಸಿ, ಗ್ರೇಡ್‌-1 ಫಾರ್ಮಾಸಿಸ್ಟ್‌ ಎಂ. ಪ್ರೇಮಾವತಿ ಹಾಗೂ ಎಸ್‌.ವಿ. ಆಯುರ್ವೇದ ಫಾರ್ಮಸಿಯ ಜಿ.ಅಸುಂತಾ ಅಮಾನತುಗೊಂಡವರು.

'ಈ ನಾಲ್ವರು ಇತರೆ ಧರ್ಮ ಅನುಸರಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ' ಎಂದು ಟಿಟಿಡಿ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

'ಹಿಂದೂ ಧಾರ್ಮಿಕ ಸಂಸ್ಥೆಯೊಂದನ್ನು ಪ್ರತಿನಿಧಿಸುವಾಗ ಮತ್ತು ಕೆಲಸ ಮಾಡುವಾಗ ಈ ನೌಕರರು ತಮ್ಮ ಕರ್ತವ್ಯಗಳಲ್ಲಿ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಹಾಗೂ ಸಂಸ್ಥೆಯ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ' ಎನ್ನಲಾಗಿದೆ.

ಟಿಟಿಡಿಯ ಜಾಗೃತ ದಳ ಸಲ್ಲಿಸಿದ ವರದಿ ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ, ನಿಯಮಗಳ ಪ್ರಕಾರವೇ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries