HEALTH TIPS

ಬಾಳಿಯೂರಲ್ಲಿ ಅಕಾಡೆಮಿ ಪ್ರಾಯೋಜಕತ್ವದ ಯಕ್ಷಗಾನ ತರಬೇತಿ ಉದ್ಘಾಟನೆ

ಮಂಜೇಶ್ವರ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಪ್ರಾಯೋಜಕತ್ವದಲ್ಲಿ ಬಾಳಿಯೂರಿನ ಶ್ರೀ ಅಯ್ಯಕೃಪಾ ಯಕ್ಷಗಾನ ಅಧ್ಯಯನಕೇಂದ್ರದ ಆಶ್ರಯದಲ್ಲಿ ಎರಡು ತಿಂಗಳ ಉಚಿತ ಯಕ್ಷಗಾನ ತರಬೇತಿಯನ್ನು ಇತ್ತೀಚೆಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸತೀಶ ಅಡಪ ಸಂಕಬೈಲು ದೀಪ ಬೆಳಗಿಸಿ  ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಕ್ಷಗಾನ ಕಲೆ ಭಾರತೀಯ ಸಂಸ್ಕøತಿ, ಪುರಾಣ ಕತೆ, ಹಾಗೂ ಕನ್ನಡ ಭಾಷೆಯ ಉಳಿವಿಗೆ ದೊಡ್ಡ ಕೊಡುಗೆ ನೀಡಿದೆ. ಮಕ್ಕಳಲ್ಲಿ ಹಾಗೂ ಆಸಕ್ತರಿಗೆ ಯಕ್ಷಗಾನ ಕಲೆಯನ್ನು ಕಲಿಸಿ ಮುಂದಿನ ಪೀಳಿಗೆಗೆ ಕಲೆಯನ್ನು ದಾಟಿಸುವ ದೊಡ್ಡ ಕಾರ್ಯ ಅಕಾಡೆಮಿ ಹಮ್ಮಿ ಕೊಂಡಿದೆ ಎಂದು ಅಭಿಪ್ರಾಯ ಪಟ್ಟರು.

ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಳಿಯೂರು ಇದರ ಅಧ್ಯಕ್ಷ ಮುತ್ತು ಶೆಟ್ಟಿ ಬಾಳಿಯೂರು ಅಧ್ಯಕ್ಷತೆ ವಹಿಸಿದ್ದರು. ತಂಡದ ಯಕ್ಷಗಾನ ಗುರುಗಳಾದ ಶೇಖರ ಶೆಟ್ಟಿ ಬಾಯಾರು, ಮಂದಿರದ ಗುರುಸ್ವಾಮಿ ರಾಧಾಕೃಷ್ಣ ರೈ ಗೌರವ ಉಪಸ್ಥಿತಿತರಿದ್ದು ಶುಭಹಾರೈಸಿದರು. ಶಿಕ್ಷಕಿ ತಾರಾಮಣಿ ವಿ. ರೈ, ಅಧ್ಯಾಪಕ ಅಶೋಕ್ ಕುಮಾರ್ ಡಿ., ಮೃತ್ಯುಂಜಯ ಯುವಕವೃಂದ ಕಲ್ಲಗದ್ದೆ ಸಂಘಟನೆಯ ಪ್ರಧಾನ ಸಂಚಾಲಕಿ ಅಶ್ವಿನಿ ಕಲ್ಲಗದ್ದೆ, ಮಂದಿರದ ಸಂಚಾಲಕ ಯೋಗೀಶ ರಾವ್ ಚಿಗುರುಪಾದೆ, ಮುಖ್ಯೋಪಾಧ್ಯಾಯ ಅರವಿಂದಾಕ್ಷ ಭಂಡಾರಿ ದಡ್ಡಂಗಡಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಯಕ್ಷಗಾನ ಅಕಾಡೆಮಿ ಸದಸ್ಯ ಸತೀಶ ಅಡಪ ಸಂಕಬೈಲು, ಹಾಗೂ ಯಕ್ಷಗಾನ ಗುರು ಶೇಖರ ಶೆಟ್ಟಿ ಬಾಯಾರು ಅವರನ್ನು ಗಣ್ಯರ ಸಮಕ್ಷಮ ಗೌರವಿಸಲಾಯಿತು. ರಾಮಕೃಷ್ಣ ಸಂತಡ್ಕ ಸ್ವಾಗತಿಸಿ, ಬ್ರಿಜೇಶ್ ಬಾಳಿಯೂರು ವಂದಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries