ಮಧೂರು: ಸಾಂಸ್ಕøತಿಕ ಕ್ಷೇತ್ರದ ಅಧ್ಯಯನ ಯೋಗ್ಯ ಚಟುವಟಿಕೆಗಳಿಗೆ ಪ್ರಧಾನವನಿಸಿದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಜುಲೈ 27 ರಂದು ಭಾನುವಾರ ತೆಂಕುತಿಟ್ಟಿನ ಯಕ್ಷಗಾನ ಹಿಮ್ಮೇಳ ಕಲಾವಿದರಿಗೆ ವಿಶೇಷ ಶಿಬಿರ ಆಯೋಜಿಸಲಾಗಿದೆ. ಶಿಬಿರವನ್ನು ತೆಂಕುತಿಟ್ಟು ಯಕ್ಷಗಾನದ ಹಿಮ್ಮೇಳ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹರಿ ನಾರಾಯಣ ಬೈಪಡಿತಾಯ ಹಾಗೂ ಪದ್ಯಾಣ ಶಂಕರನಾರಾಯಣ ಭಟ್ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ ಭಟ್ ಭಾಗವಹಿಸಲಿದ್ದಾರೆ. ತೆಂಕುತಿಟ್ಟು ಯಕ್ಷಗಾನದ ಐವತ್ತಕ್ಕೂ ಹೆಚ್ಚು ವೃತ್ತಿಪರ ಹವ್ಯಾಸಿ, ಹಿಮ್ಮೇಳದ ಕಲಾವಿದರು ಭಾಗವಹಿಸಲಿದ್ದಾರೆ. ಶಿಬಿರದ ಜೊತೆ ಶ್ರೀಸತ್ಯಸಾಯಿ ಸೇವಾ ಸಮಿತಿ ಪೆರ್ಲ ಇವರ ಸಹಭಾಗಿತ್ವದಲ್ಲಿ ಡಾ. ಕೃಷ್ಣ ಮೋಹನ ಪೆರ್ಲ ಮತ್ತು ಡಾ. ಸತ್ಯನಾರಾಯಣ ಇವರ ಮಾರ್ಗದರ್ಶನದಲ್ಲಿ ಕಲಾವಿದರಿಗೆ ಹಾಗೂ ನಾಗರಿಕರಿಗೆ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರವು ನಡೆಯಲಿದೆ. ಇದರ ಪ್ರಯೋಜನವನ್ನು ಕಲಾವಿದರು ನಾಗರಿಕರು ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಿರಿಬಾಗಿಲು ಪ್ರತಿಷ್ಠಾನವು ಪ್ರಕಟಣೆ ಮೂಲಕ ತಿಳಿಸಿದೆ.






