ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಐದನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಸಂಪಾಜೆಯ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ವತಿಯಿಂದ ನಡೆದುಬರುತ್ತಿರುವ ಅಮೋಘ ಯಕ್ಷಗಾನ ತಾಳಮದ್ದಳೆ ದಶಾಹ ಸಮಾರೋಪ ಸಮಾರಂಭ ಜುಲೈ 27ರಂದು ಜರುಗಲಿದೆ.
ಅಂದು ಮಧ್ಯಾಹ್ನ 3ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವ ವಿದ್ಯಾಲಯ ಉಪಕುಲಪತಿ ಡಾ. ಪಿ.ಎಲ್ ಧರ್ಮ ಉದ್ಘಾಟಿಸುವರು. ಕರ್ನಾಟಕ ಸರ್ಕಾರದ ಮಾನವ ಹಕ್ಕುಗಳ ಆಯೋಗ ಅಧ್ಯಕ್ಷ ಡಾ. ಟಿ.ಶ್ಯಾಮ ಭಟ್ ಐಎಎಸ್ ಅಧ್ಯಕ್ಷತೆ ವಹಿಸುವರು. ಖ್ಯಾತ ಉದ್ಯಮಿ, ಮುಂಡಪ್ಪಳ್ಳ ಶ್ರೀರಾಜರಾಜೇಶ್ವರೀ ದೇವಸ್ಥಾನ ಆಡಳಿತ ಮೊಕ್ತೇಸರ ಕೆ.ಕೆ ಶೆಟ್ಟಿ, ಖ್ಯಾತ ಜ್ಯೋತಿಷಿ ಪದ್ಮನಾಭ ಶರ್ಮ ಇರಿಞËಲಕುಡ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಈ ಸಂದರ್ಭ ಬಡಗು ತಿಟ್ಟಿನ ಹಿರಿಯ ಭಾಗವತ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕೊಳಗಿ ಕೇಶವ ಹೆಗಡೆ ಅವರನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದ ಅಂಗವಾಗಿ 'ಕೃಷ್ಣ ಸಂಧಾನ'ಯಕ್ಷಗಾನ ತಾಳಮದ್ದಳೆ ನಡೆಯುವುದು.




