HEALTH TIPS

ಎಡನೀರು ಶ್ರೀಗಳ ಚಾತುರ್ಮಾಸ್ಯ- ಕಾಸರಗೋಡು ವಲಯ ಸಮಿತಿ ಸಭೆ

ಕಾಸರಗೋಡು: ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ 5 ನೇ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಕಾಸರಗೋಡು ವಲಯ ಸಮಿತಿಯ ಸಭೆಯು ಕಾಸರಗೋಡು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗಿತು. 

ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ವಲಯ ಸಮಿತಿಯನ್ನು ರಚಿಸಲಾಯಿತು.   ಚಾತುರ್ಮಾಸ್ಯದ ಅಂಗವಾಗಿ ಜುಲೈ 27ರಂದು ಕಾಸರಗೋಡಿನಿಂದ ಹೊರೆಕಾಣಿಕೆ ಸಹಿತ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ವಲಯ ಸಮಿತಿ ರಕ್ಷಾಧಿಕಾರಿಯಾಗಿ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ, ಗೌರವಾಧ್ಯಕ್ಷರಾಗಿ ರಾಮ್ ಪ್ರಸಾದ್ ಕಾಸರಗೋಡು, ಅಧ್ಯಕ್ಷರಾಗಿ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಉಪಾಧ್ಯಕ್ಷರಾಗಿ ಅಶೋಕ ನಾಯ್ಕ್, ಕಾರ್ಯದರ್ಶಿಯಾಗಿ ಕೆ. ಜಗದೀಶ್ ಕೂಡ್ಲು, ಕೋಶಾಧಿಕಾರಿಯಾಗಿ ಗುರುಪ್ರಸಾದ್ ಕೋಟೆಕಣಿ, ಪ್ರದೀಪ್ ಬೇಕಲ್, ಸೂರ್ಯಕಾಂತಿ, ಶ್ರೀಲತಾ ಮೊದಲಾದವರನ್ನು ಆಯ್ಕೆಮಾಡಲಾಯಿತು. ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.  ಕೆ.ಜಗದೀಶ್ ಕೂಡ್ಲು ಸ್ವಾಗತಿಸಿದರು. ಗುರುಪ್ರಸಾದ್ ಕೋಟೆಕಣಿ ಕಾರ್ಯಕ್ರಮ ನಿರೂಪಿಸಿದರು. ಕೆ.ಎನ್. ರಾಮಕೃಷ್ಣ ಹೊಳ್ಳ ವಂದಿಸಿದರು. ಚಾತುರ್ಮಾಸ್ಯ ಸಮಾರಂಭ ಜುಲೈ 10ರಿಂದ ಸೆ. 7ರ ವರೆಗೆ ಜರುಗಲಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries