HEALTH TIPS

ನ್ಯಾಯಾಂಗದ ಪ್ರಕ್ರಿಯೆ ರಾಜಕೀಯಗೊಳಿಸಬೇಡಿ: ಸುಪ್ರೀಂ ಕೋರ್ಟ್‌ ಎಚ್ಚರಿಕೆ

ನವದೆಹಲಿ: ನ್ಯಾಯಾಂಗಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ರಾಜಕೀಯಗೊಳಿಸುವುದರ ವಿರುದ್ಧ ಸುಪ್ರೀಂ ಕೋರ್ಟ್‌ ಸೋಮವಾರ ಎಚ್ಚರಿಕೆ ನೀಡಿದೆ.

ಶಿಕ್ಷಕರ ನೇಮಕಾತಿ ಹಗರಣ ಪ್ರಕರಣದ ತೀರ್ಪಿನ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆಗಳಿಗೆ ಅವರ ವಿರುದ್ಧ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ಸಮಯದಲ್ಲಿ ಈ ಹೇಳಿಕೆ ನೀಡಿದೆ.

'ನಿಮ್ಮ ರಾಜಕೀಯ ಹೋರಾಟವನ್ನು ದಯವಿಟ್ಟು ಈ ನ್ಯಾಯಾಲಯದ ಹೊರಗೆ ಮಾಡಿ' ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠ ಹೇಳಿತು.

ಮಮತಾ ಅವರು ನ್ಯಾಯಾಂಗದ ಅಧಿಕಾರವನ್ನು ದುರ್ಬಲಗೊಳಿಸುವ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಆತ್ಮದೀಪ್ ಚಾರಿಟಬಲ್‌ ಟ್ರಸ್ಟ್‌ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಪೀಠವು ನಡೆಸುತ್ತಿದೆ.

ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಮಣಿಂದರ್ ಸಿಂಗ್, ವಿಚಾರಣೆಯನ್ನು ಮುಂದೂಡುವಂತೆ ಪೀಠವನ್ನು ಒತ್ತಾಯಿಸಿದರಲ್ಲದೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಪ್ರಾರಂಭಿಸಲು ಒಪ್ಪಿಗೆ ನೀಡುವಂತೆ ಅಟಾರ್ನಿ ಜನರಲ್‌ ಅವರಿಗೆ ಮನವಿಯನ್ನು ಕಳುಹಿಸಲಾಗಿದೆ ಎಂದರು.

ಅದಕ್ಕೆ ಸಿಜೆಐ, 'ಒಪ್ಪಿಗೆ ಸಿಗಲಿದೆ ಎಂಬುದು ನಿಮಗೆ ಖಚಿತವಾಗಿದೆಯೇ? ನ್ಯಾಯಾಲಯದ ಮುಂದೆ ರಾಜಕೀಯ ತರಲು ಪ್ರಯತ್ನಿಸಬೇಡಿ. ನಿಮ್ಮ ರಾಜಕೀಯ ಹೋರಾಟವನ್ನು ಬೇರೆ ಎಲ್ಲಾದರೂ ಮಾಡಿ' ಎಂದು ತರಾಟೆಗೆ ತೆಗೆದುಕೊಂಡರು. ಪೀಠವು ವಿಚಾರಣೆಯನ್ನು ನಾಲ್ಕು ವಾರಗಳ ಅವಧಿಗೆ ಮುಂದೂಡಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries