ಮಂಜೇಶ್ವರ : ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವ್ಯವಸ್ಥಾಪನಾ ಸಮಿತಿಯ ಮಹಾಸಭೆ ಗುರುವಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ವಹಿಸಿದ್ದರು. ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಉಷಾ ಆದರ್ಶನಗರ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಅನುಪಮ ಚಿನಾಲ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕಿ ಸೌಮ್ಯ ಪಿ. ಶಾಲಾ ಸುರಕ್ಷತೆಯ ಕುರಿತಾಗಿ ರಕ್ಷಕರಿಗೆ ಮಾಹಿತಿ ನೀಡಿ ಶಾಲಾ ಸುರಕ್ಷಾ ಸಮಿತಿಯನ್ನು ರಚಿಸಿದರು.
ನೂತನ ಶಾಲಾ ವ್ಯವಸ್ಥಾಪನಾ ಸಮಿತಿಯನ್ನು ರೂಪೀಕರಿಸಲಾಯಿತು. ಅಧ್ಯಕ್ಷರಾಗಿ ಜಯರಾಜ್ ಶೆಟ್ಟಿ ಚಾರ್ಲ ಹಾಗೂ ಉಪಾಧ್ಯಕ್ಷರಾಗಿ ಸತೀಶ್ ಎಲಿಯಾಣ ಅವಿರೋಧವಾಗಿ ಪುನರಾಯ್ಕೆಯಾದರು. ಸದಸ್ಯರಾಗಿ ಪ್ರತಿಭಾ ನಾಯಕ್ ಕುಳಬೈಲ್, ಉದಯಕುಮಾರಿ ಕುಳೂರು, ಶ್ವೇತ ಕೇಮಜಲ್, ಅಶ್ವಿತ ಕೇಮಜಲ್, ಅನುಪಮ ಚಿನಾಲ, ಹರಿಣಾಕ್ಷಿ ಕೇಮಜಲ್, ವಿದ್ಯಾ ಕಾಯರ್ ತೊಟ್ಟಿ, ಲೀಲಾವತಿ ಕುಳೂರು ಕನ್ಯಾನ ಆಯ್ಕೆಯಾದರು.
ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆಯಾಗಿ ಕವಿತಾ ಗಂಗಾಧರ್ ದೇರಂಬಳ, ಉಪಾಧ್ಯಕ್ಷೆಯಾಗಿ ಉಷಾ ಆನಂದ ಆಚಾರ್ಯ ಆದರ್ಶನಗರ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಪ್ರಿಯಾಂಕ ಪ್ರಶಾಂತ್ ಕೇಮಜಲ್ ಅವಿರೋಧವಾಗಿ ಆಯ್ಕೆಯಾದರು. ಶಿಕ್ಷಕಿ ನಯನ ಸ್ವಾಗತಿಸಿ, ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.




.jpg)
.jpg)
