HEALTH TIPS

ಭಯೋತ್ಪಾದಕರಿಗೆ ಶಿಕ್ಷೆಯಿಂದ ವಿನಾಯಿತಿ ಇಲ್ಲ; ವಿಶ್ವಸಂಸ್ಥೆಯಲ್ಲಿ ಜೈಶಂಕರ್

ವಿಶ್ವಸಂಸ್ಥೆ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ಸಂದೇಶ ಸಾರಿದ್ದು, ಭಯೋತ್ಪಾದಕರಿಗೆ ಶಿಕ್ಷೆಯಿಂದ ಯಾವುದೇ ಕಾರಣಕ್ಕೂ ವಿನಾಯಿತಿ ನೀಡುವುದಿಲ್ಲ. ಈ ಬಗ್ಗೆ ಜಾಗತಿಕ ಸಮುದಾಯವು ಒಗ್ಗೂಡಬೇಕೆಂದು ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ವಿಶ್ವಸಂಸ್ಥೆಯಲ್ಲಿ ಒತ್ತಾಯಿಸಿದ್ದಾರೆ.

'ದಿ ಹ್ಯೂಮನ್ ಕಾಸ್ಟ್‌ ಆಫ್ ಟೆರರಿಸಂ' ಎಂಬ ಶೀರ್ಷಿಕೆಯ ಪ್ರದರ್ಶನದಲ್ಲಿ ವಿಶ್ವದ ವಿವಿಧೆಡೆ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ಪರಿಣಾಮವನ್ನು ವಿವರಿಸಲಾಗಿದೆ. ಅದನ್ನು ಹತ್ತಿಕ್ಕಲು ನಡೆಯುತ್ತಿರುವ ಯತ್ನಗಳನ್ನೂ ಬಿಂಬಿಸಲಾಗಿದೆ.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಜೈಶಂಕರ್ ಉಲ್ಲೇಖಿಸಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ಭಯೋತ್ಪಾದನಾ ಕೃತ್ಯವನ್ನು ಬಲವಾಗಿ ಖಂಡಿಸಿದೆ. ಭಯೋತ್ಪಾದಕರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದೆ.

'ಭಯೋತ್ಪಾದನೆ ವಿರುದ್ಧ ಭಾರತ ಶೂನ್ಯ ಸಹಿಷ್ಣುತೆಯ ಸಂದೇಶ ಸಾರಿದೆ. ಭಯೋತ್ಪಾದಕರಿಗೆ ಶಿಕ್ಷೆಯಿಂದ ವಿನಾಯಿತಿ ನೀಡಬಾರದು. ಪರಮಾಣು ಬಾಂಬ್‌ ದಾಳಿಗೆ ಆತಂಕಗೊಳ್ಳಬಾರದು. ಈ ಬಗ್ಗೆ ಜಗತ್ತು ಒಗ್ಗಟ್ಟಿನಿಂದ ಎದುರಿಸಬೇಕೆಂದು' ಜೈಶಂಕರ್ ಹೇಳಿದ್ದಾರೆ.

ಭಯೋತ್ಪಾದನೆಯನ್ನು ನಾಶಪಡಿಸುವಂತಹ ಮೌಲ್ಯಗಳು ಹಾಗೂ ಮಾನವ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿಯೇ ನಾವು ಕಾರ್ಯಪ್ರವೃತ್ತರಾಗಬೇಕು ಎಂದು ಜೈಶಂಕರ್ ತಿಳಿಸಿದ್ದಾರೆ.

ಜೈಶಂಕರ್ ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿ ಇದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries