ಕಾಸರಗೋಡು: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಐದನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಸೆಪ್ಟೆಂಬರ್ 7ರವರೆಗೆ ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಎಡನೀರು ಶ್ರೀಮಠದಲ್ಲಿ ಜರಗಲಿದೆ.
10ರಂದು ಬೆಳಗ್ಗೆ 8ಕ್ಕೆ ವ್ಯಾಸಪೂಜೆ, ಚಾತುರ್ಮಾಸ್ಯ ವ್ರತಸಂಕಲ್ಪ, ಹೋಮಗಳ ಪೂರ್ಣಾಹುತಿ, 9ಕ್ಕೆ 60 ದಿವಸಗಳ ಕಾಳ ನಡೆಯಲಿರುವ ಭಜನೆಗೆ ಚಾಲನೆ ನೀಡಲಾಗುವುದು. ಎಡನೀರು ಶ್ರೀ ಗೋಪಾಲಕೃಷ್ಣ ಮಹಿಳಾ ಭಜನಾ ಮಂಡಳಿಯಿಂದ ಭಜನೆ ನಡೆಯುವುದು. 11ರಿಂದ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಮತ್ತು ಬಳಗದವರಿಂದ ಭಕ್ತಿ ಸಂಗೀತ, ಮಧ್ಯಾಹ್ನ 2.30ಕ್ಕೆ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯುವುದು. ಶ್ರೀ ಮಧ್ವಾಚಾರ್ಯ ಮೂಲಸಂಸ್ಥಾನಂ ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದಂಗಳವರು ಆಶೀರ್ವಚನ ನೀಡುವರು. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ. ಎಂ. ಮೋಹನ ಆಳ್ವ ಸಮಾರಂಭ ಉದ್ಘಾಟಿಸುವರು. ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅಧ್ಯಕ್ಷತೆ ವಹಿಸುವರು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ದಿವ್ಯ ಉಪಸ್ಥಿತರಿರುವರು.
ಸಂಜೆ 5ಕ್ಕೆ ನಡೆಯುವ 'ವೇಣು ನಿನಾದ' ಸಂಗೀತ ಕಾರ್ಯಕ್ರಮದಲ್ಲಿ ವಿದ್ವಾನ್ ಶಶಾಂಕ್ ಸುಬ್ರಹ್ಮಣ್ಯಂ ಚೆನ್ನೈ ಕೊಳಲು, ವಿದ್ವಾನ್ ವಿಠಲ್ ರಾಮಮೂರ್ತಿ ಚೆನ್ನೈ ವಯಲಿನ್ ಹಾಗೂ ವಿದ್ವಾನ್ ಪತ್ರಿ ಸತೀಶ್ ಕುಮಾರ್ ಚೆನ್ನೈ ಮೃದಂಗದಲ್ಲಿ ಸಹಕರಿಸುವರು.
ಯೂಟ್ಯೂಬ್ ಲೋಕಾರ್ಪಣೆ:
ಶ್ರೀ ಎಡನೀರು ಮಠದ ಯೂಟ್ಯೂಬ್ ಚಾನೆಲ್'ಆನಂದ ಭಾರತಿ'ಯನ್ನು ಖ್ಯಾತ ಅನಿವಾಸಿ ಉದ್ಯಮಿ ಇ. ಮಹಾಬಲೇಶ್ವರ ಭಟ್ ಲೋಕಾರ್ಪಣೆಗೈಯುವರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬಿ. ಸೀತಾರಾಮ ತೋಳ್ಪಡಿತ್ತಾಯ ಉಪಸ್ಥಿತರಿರುವರು.
ಇಂದು ಸಮಾಲೋಚನಾ ಸಭೆ:
ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ಪೂರ್ವಭಾವಿಯಾಗಿ ಸಮಾಲೋಚನಾ ಸಭೆ ಜುಲೈ 9ರಂದು ಸಂಜೆ 6ಕ್ಕೆ ಎಡನೀರ್ ಶ್ರೀ ಮಠದಲ್ಲಿ ಜರುಗಲಿದೆ. ಹೊರೆಕಾಣಿಕೆ, ಸ್ವಯಂಸೇವಕರ ನಿಯೋಜನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿರುವುದಾಘಿ ಪ್ರಕಟಣೆ ತಿಳಿಸಿದೆ.


