HEALTH TIPS

ಮಣಿಪುರ ವಿಚಾರ: ಲೋಕಸಭೆ ಕಲಾಪ ಮುಂದೂಡಿಕೆ

ನವದೆಹಲಿ: ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ವಿಸ್ತರಣೆಗೆ ಸಂಬಂಧಿಸಿದಂತೆ ಬುಧವಾರ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ವಾಗ್ವಾದ ನಡೆದಿದ್ದರಿಂದ, ಲೋಕಸಭೆ ಕಲಾಪವನ್ನು ಅರ್ಧಗಂಟೆ ಮುಂದೂಡಲಾಯಿತು. 

ಕಾಂಗ್ರೆಸ್‌ನ ಕುಮಾರಿ ಸೆಲ್ಜಾ ಸದಸ್ಯರನ್ನು ಸಮಾಧಾನಪಡಿಸಲು ಯತ್ನಿಸಿದರು.

ಆದರೆ, ಎರಡೂ ಪಕ್ಷಗಳ ಸದಸ್ಯರು ಗದ್ದಲ ಮುಂದುವರಿಸಿದ್ದರಿಂದ ಕಲಾಪವನ್ನು ಮುಂದೂಡಲಾಯಿತು.

ಟಿಎಂಸಿಯ ಕೊಲಿ ಘೋಷ್ ದಸ್ತಿದಾರ್‌ ಅವರು, ಬಂಗಾಳಿಯಲ್ಲಿ ಮಣಿಪುರ ವಿಚಾರವನ್ನು ಪ್ರಸ್ತಾಪಿಸಿದರು.ಅವರ ಹೇಳಿಕೆಯೊಂದು ಆಡಳಿತ ಪಕ್ಷದ ಸದಸ್ಯರನ್ನು ಕೆರಳಿಸಿತು. ಈ ವಿಚಾರವಾಗಿ ವಾಕ್ಸಮರ ಮುಂದುವರಿಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries