ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಸಿಗಾಚಿ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದ ನಂತರ ನಾಪತ್ತೆಯಾದವರಿಗಾಗಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಸ್ಫೋಟದ ನಂತರ ನಾಪತ್ತೆಯಾದ ಎಂಟು ಮಂದಿ ಬಗ್ಗೆ ಈವರೆಗೆ ಯಾವುದೇ ಕುರುಹು ಲಭ್ಯವಾಗಿಲ್ಲ.
ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ 100ಕ್ಕೂ ಹೆಚ್ಚು ದೇಹದ ಭಾಗಗಳು ಪತ್ತೆಯಾಗಿವೆ. ಅವುಗಳ ಗುರುತು ಪತ್ತೆಗಾಗಿ ಸಂಬಂಧಿಕರ ರಕ್ತದ ಮಾದರಿಯೊಂದಿಗೆ ಡಿಎನ್ಎ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.




