ನವದೆಹಲಿ: ಡ್ರೋನ್ ಮೂಲಕ ದಾಳಿ ನಡೆಸಬಹುದಾದ ನಿಖರ ನಿರ್ದೇಶಿತ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವು ಆಂಧ್ರ ಪ್ರದೇಶದ ಕರ್ನೂಲ್ನಲ್ಲಿ ಯಶಸ್ವಿಯಾಗಿ ಶುಕ್ರವಾರ ನಡೆಯಿತು.
ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, 'ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ನೇತೃತ್ವದಲ್ಲಿ ಯುಎಲ್ಪಿಜಿಎಂ-ವಿ3 ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು.
ಇದರಿಂದ ರಕ್ಷಣಾ ವಲಯದಲ್ಲಿ ಭಾರತದ ಸಾಮರ್ಥ್ಯವು ಇಮ್ಮಡಿಗೊಂಡಿದೆ' ಎಂದು ಹೇಳಿದರು.




