ಕುಂಬಳೆ: ಸಂತೋಷ್ ಆಟ್ರ್ಸ್ ಮತ್ತು ಸ್ಪೋಟ್ರ್ಸ್ ಕ್ಲಬ್ ಸೀತಾಂಗೋಳಿ ಇದರ ವಾರ್ಷಿಕ ಮಹಾಸಭೆ ಕ್ಲಬ್ ಕಚೇರಿಯಲ್ಲಿ ಜರಗಿತು. ಅಧ್ಯಕ್ಷ ಕೆ.ಮಹಾಲಿಂಗ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ವಾರ್ಷಿಕ ವರದಿ, ಕೋಶಾಧಿಕಾರಿ ಪ್ರಸಾದ್ ಲೆಕ್ಕಪತ್ರ ಮಂಡಿಸಿದರು. ಗಣೇಶ್ ಪ್ರಾರ್ಥನೆ ಹಾಡಿದರು. ನೂತನ ಕಾರ್ಯಕಾರಿ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಅಧ್ಯಕ್ಷರಾಗಿ ವಕೀಲ ಥೋಮಸ್ ಡಿಸೋಜಾ, ಉಪಾಧ್ಯಕ್ಷರಾಗಿ ಅಪ್ಪಣ್ಣ ಪಾಟಾಳಿ, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ರಾಜ್, ಕ್ರೀಡಾ ಕಾರ್ಯದರ್ಶಿಯಾಗಿ ಅಭಿಜಿತ್, ಕಲಾ ಕಾರ್ಯದರ್ಶಿಯಾಗಿ ಶೋಭಿತ್, ಜೊತೆ ಕಾರ್ಯದರ್ಶಿಯಾಗಿ ಮೋಹನ, ಕೋಶಾಧಿಕಾರಿಯಾಗಿ ರಂಜಿತ್ ಆಯ್ಕೆಯಾದರು. ನಿರಂಜನ, ಮಹಾಲಿಂಗ ಕೆ., ಎಸ್.ಬಿ.ನಾರಾಯಣ, ಜಯಂತ ಪಾಟಾಳಿ, ರವಿ.ಜೆ.ಬಿ., ತಿಮೋತಿ ಕ್ರಾಸ್ತಾ, ರಾಜೇಶ್, ಪೃಥ್ವಿರಾಜ್, ಉದಯ ಸದಸ್ಯರಾಗಿಯೂ, ಮಾಧ್ಯಮ ಹಾಗೂ ಪ್ರಚಾರ ಸಮಿತಿಗೆ ಅಪ್ಪಣ್ಣ, ಸುಧೀಶ್ ಆಯ್ಕೆಯಾಗದರು. ಪ್ರಧಾನ ಕಾರ್ಯದರ್ಶಿ ಸತೀಶ್ ವಂದಿಸಿದರು.


