ಚೆಂಗನ್ನೂರು: ಕಲಿಕೆಯ ಜೊತೆಗೆ ಗಳಿಕೆ ಮಾಡುವ ಸಮಸ್ಕøತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಸಭಾ ಸ್ಪೀಕರ್ ಎ.ಎನ್. ಶಂಸೀರ್ ಹೇಳಿದರು.
ಚೆಂಗನ್ನೂರು ಕ್ಷೇತ್ರದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ವಿತರಣೆಯನ್ನು ಐಎಚ್ಆರ್ಡಿ ಕಾಲೇಜು ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಪರೀಕ್ಷೆಗಳಲ್ಲಿ ಹೆಚ್ಚಿನ ಫಲಿತಾಂಶಗಳನ್ನು ಸಾಧಿಸುವುದು ಮಕ್ಕಳು ಭವಿಷ್ಯದಲ್ಲಿ ಯಶಸ್ವಿಯಾಗಲು ಸ್ಫೂರ್ತಿ ನೀಡುತ್ತದೆ. ಎಸ್ಎಸ್ಎಲ್ಸಿ ಮತ್ತು ಪ್ಲಸ್ ಟು ವಿದ್ಯಾರ್ಥಿಯ ಜೀವನದಲ್ಲಿ ಪ್ರಮುಖ ತಿರುವುಗಳಾಗಿವೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಮೊದಲ ಪಬ್ಲಿಕ್ ಪರೀಕ್ಷೆಯಾಗಿದ್ದರೆ, ಪ್ಲಸ್ ಟು ಯಾವ ಕ್ಷೇತ್ರವನ್ನು ಅನುಸರಿಸಬೇಕೆಂದು ನಿರ್ಧರಿಸುವ ಒಂದು ಮಾರ್ಗವಾಗಿದೆ. ಕೇರಳದ ಶಿಕ್ಷಣ ಕ್ಷೇತ್ರ ಭಾರತಕ್ಕೆ ಮಾದರಿಯಾಗಿದೆ ಎಂದು ಸ್ಪೀಕರ್ ಹೇಳಿದರು.
ಮೀನುಗಾರಿಕೆ ಮತ್ತು ಸಂಸ್ಕೃತಿ ಸಚಿವ ಸಾಜಿ ಚೆರಿಯನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಚೆಂಗನ್ನೂರು ಐಎಚ್ಆರ್ಡಿ ಕಾಲೇಜಿನಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಚಿವರು ಹೇಳಿದರು.
ಕ್ಷೇತ್ರದಲ್ಲಿ 36 ಶಾಲಾ ಕಟ್ಟಡಗಳು ಪೂರ್ಣಗೊಂಡಿವೆ. ಉಳಿದ ಕಟ್ಟಡಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಕೇರಳದಲ್ಲಿ ಶಿಕ್ಷಣ ಕ್ಷೇತ್ರವು ದೊಡ್ಡ ಮಟ್ಟದಲ್ಲಿ ಪ್ರಗತಿ ಸಾಧಿಸುತ್ತಿದ್ದರೂ, ಚೆಂಗನ್ನೂರು ಹಿಂದೆ ಬಿದ್ದಿಲ್ಲ ಎಂದು ಅವರು ಹೇಳಿದರು.
ಎಸ್ಎಸ್ಎಲ್ಸಿ ಮತ್ತು ಪ್ಲಸ್ ಟು ಪರೀಕ್ಷೆಗಳಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಗಳಿಸಿದ ಮತ್ತು ಸಿಬಿಎಸ್ಇ, ಐಸಿಎಸ್ಇ ಮತ್ತು ಐಎಸ್ಸಿ ಪರೀಕ್ಷೆಗಳಲ್ಲಿ ಎಲ್ಲಾ ವಿಷಯಗಳಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ 640 ವಿದ್ಯಾರ್ಥಿಗಳಿಗೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ವೈಯಕ್ತಿಕ ಸಾಧನೆ ಮಾಡಿದ 100 ಜನರಿಗೆ ಪ್ರಶಸ್ತಿಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ಅರ್ಜುನ್ ಅಶೋಕನ್ ಮುಖ್ಯ ಅತಿಥಿಯಾಗಿದ್ದರು. ಕಣ್ಮಣಿ, ಮುಹಮ್ಮದ್ ಯಾಸೀನ್, ಜಾನಪದ ಅಕಾಡೆಮಿ ಅಧ್ಯಕ್ಷ ಓಎಸ್ ಉಣ್ಣಿಕೃಷ್ಣನ್, ಕೆಎಸ್ಸಿ ಎಂಎಂಸಿ ಅಧ್ಯಕ್ಷ ಎಂಎಚ್ ರಶೀದ್, ಚೆಂಗನ್ನೂರು ನಗರಸಭೆ ಅಧ್ಯಕ್ಷೆ ಶೋಭಾ ವರ್ಗೀಸ್, ಚೆಂಗನ್ನೂರು ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ.ಎಂ. ಸಲೀಂ, ಸಂಘಟನಾ ಸಮಿತಿ ಅಧ್ಯಕ್ಷ ಅಡ್ವ. ಎಂ.ಶಶಿಕುಮಾರ್, ಪಂಚಾಯಿತಿ ಅಧ್ಯಕ್ಷರಾದ ಪುಷ್ಪಲತಾ ಮಧು, ಕೆ.ಆರ್.ಮುರಳೀಧರನ್ ಪಿಳ್ಳೈ, ಎಂ.ಜಿ.ಶ್ರೀಕುಮಾರ್, ಟಿ.ವಿ.ರತ್ನಕುಮಾರಿ, ಕೆ.ಕೆ.ಸದಾನಂದನ್, ಟಿ.ಸಿ.ಸುನಿಮೋಳ್, ಪ್ರಸನ್ನ ರಮೇಶನ್, ಪಿ.ವಿ.ಸಾಜನ್, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾದೇವಿ, ನಗರಸಭಾ ವಿ.ವಿ.ಜಿ., ಬಿಪಿಒ ಜಿ.ಕೃಷ್ಣಕುಮಾರ್, ಪಿ.ಸೆಲ್ವರಾಜನ್ ಮತ್ತಿತರರು ಭಾಗವಹಿಸಿದ್ದರು.






