HEALTH TIPS

ಕಾವಡ್‌ ಯಾತ್ರೆ: QR ಕೋಡ್‌ ಅಳವಡಿಸುವ ನಿರ್ದೇಶನಕ್ಕೆ ತಡೆ ನೀಡಲು 'ಸುಪ್ರೀಂ' ನಕಾರ

ನವದೆಹಲಿ: ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಸಾಗುವ ಕಾವಡ್‌ ಯಾತ್ರೆಯ ಮಾರ್ಗದಲ್ಲಿ ಬರುವ ಎಲ್ಲ ಹೋಟೆಲ್‌ ಮಾಲೀಕರು ತಮ್ಮ ಪರವಾನಗಿ ಮತ್ತು ನೋಂದಣಿ ಪ್ರಮಾಣ ಪತ್ರವನ್ನು ಪ್ರದರ್ಶಿಸಬೇಕು, ಇದಕ್ಕಾಗಿ ಕ್ಯೂಆರ್‌ ಕೋಡ್ ಅಳವಡಿಸಬೇಕು ಎಂಬ ಸರ್ಕಾರದ ನಿರ್ದೇಶನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದೆ.

'ಕಾವಡ್‌ ಯಾತ್ರೆಗೆ ಮಂಗಳವಾರ ಕೊನೇ ದಿನ ಎಂದು ನಮಗೆ ತಿಳಿಸಲಾಗಿದೆ. ಹೇಗಿದ್ದರೂ ಯಾತ್ರೆಯು ಅಂತ್ಯವಾಗುತ್ತಿದೆ. ಆದ್ದರಿಂದ, ಈ ಹಂತದಲ್ಲಿ ಸರ್ಕಾರದ ನಿರ್ದೇಶನವನ್ನು ಪಾಲಿಸಿ ಎಂದೇ ನಾವೂ ಹೇಳಬೇಕಾಗುತ್ತದೆ' ಎಂದು ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್‌ ಮತ್ತು ಎನ್‌.ಕೋಟೀಶ್ವರ್ ಸಿಂಗ್‌ ಅವರಿದ್ದ ಪೀಠವು ಹೇಳಿತು.

ಕ್ಯೂಆರ್‌ ಕೋಡ್‌ ಅಳವಡಿಸಬೇಕು ಎಂಬ ನಿರ್ದೇಶನದ ವಿರುದ್ಧ ಶಿಕ್ಷಣ ತಜ್ಞ ಅಪೂರ್ವಾನಂದ ಝಾ ಮತ್ತು ಇತರರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries