HEALTH TIPS

ಉದ್ಯೋಗ ಕೊಡಲು RJD ಬಡವರ ಭೂಮಿ ಕಿತ್ತುಕೊಂಡಿತು: ಬಿಹಾರದಲ್ಲಿ ಮೋದಿ ವಾಗ್ದಾಳಿ

ಮೋತಿಹಾರಿ : ಆರ್‌ಜೆಡಿ ಪಕ್ಷವು ಯುವಕರಿಗೆ ಉದ್ಯೋಗ ನೀಡುವ ಬಗ್ಗೆ ಯೋಚಿಸುವುದಿಲ್ಲ, ಯಾಕೆಂದರೆ ಅವರು ಕೆಲಸ ನೀಡುವ ಮೊದಲು ಬಡವರ ಜಮೀನು ಕಿತ್ತುಕೊಂಡರು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರೊಂದಿಗೆ ತಳುಕು ಹಾಕಿಕೊಂಡಿರುವ 'ಉದ್ಯೋಗಕ್ಕಾಗಿ ಭೂಮಿ' ಹಗರಣವನ್ನು ಉಲ್ಲೇಖಿಸಿ ಪ್ರಧಾನಿ ಹೀಗೆ ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಆರ್‌ಜೆಡಿ ಪಕ್ಷಗಳು ಬಡವರ ಹಾಗೂ ಸಾಮಾಜಿಕವಾಗಿ ಹಿಂದುಳಿದವರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ, ಆದರೆ ಉಭಯ ಪಕ್ಷಗಳು ಈ ಹಿಂದೆ ಈ ಸಮುದಾಯಗಳನ್ನು ನಿರ್ಲಕ್ಷಿಸಿತ್ತು ಎಂದು ಪ್ರಧಾನಿ ಆರೋಪಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯ ಅಂಗವಾಗಿ ಮೋತಿಹಾರಿಯಲ್ಲಿ ಆಯೋಜಿಸಲಾದ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, 'ಬನಾಯೇಂಗೆ ನಯಾ ಬಿಹಾರ್, ಫಿರ್ ಏಕ್ ಬಾರ್ ಎನ್‌ಡಿಎ ಸರ್ಕಾರ್' (ಹೊಸ ಬಿಹಾರ ಮಾಡುತ್ತೇವೆ, ಮತ್ತೊಮ್ಮೆ ಎನ್‌ಡಿಎ ಸರ್ಕಾರ) ಎನ್ನುವ ಹೊಸ ಘೋಷಣೆಯನ್ನೂ ಮಾಡಿದ್ದಾರೆ.

ಅಪರೇಷನ್ ಸಿಂಧೂರ ನಡೆಯುವ ನಿರ್ಧಾರವನ್ನು ನಾನು ಬಿಹಾರದ ನೆಲದಲ್ಲೇ ನಿಂತು ಮಾಡಿದ್ದೆ. ಅದರ ಯಶಸ್ಸನ್ನು ಇಡೀ ಜಗತ್ತು ನೋಡಿದೆ ಎಂದು ಹೇಳಿದ್ದಾರೆ.

ಆರ್‌ಜೆಡಿ-ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿದ್ದವು. ಅವರಿಗೆ ಬಡವರ ಕಲ್ಯಾಣದ ಬಗ್ಗೆ ಯೋಚನೆಯೇ ಇಲ್ಲ. ಅವರು ಬಡವರು, ಸಾಮಾಜಿಕವಾಗಿ ಹಿಂದುಳಿದವರ ಹೆಸರಿನಲ್ಲಿ ರಾಜಕೀಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಯುವಕರಿಗೆ ಹೆಚ್ಚಿನ ಅವಕಾಶ ನೀಡುತ್ತೇವೆ ಎಂದು ಭರವಸೆ ನೀಡಿದ ಅವರು, ದೇಶದಲ್ಲಿ ಯುವಕರಿಗೆ ಉದ್ಯೋಗಾವಕಾಶ ನೀಡಲು ಕೇಂದ್ರ ಸರ್ಕಾರ ಒಂದು ಲಕ್ಷ ಕೋಟಿ ಹೂಡಿಕೆ ಮಾಡಲಿದೆ ಎಂದರು.

ಪೂರ್ವ ಭಾರತದ ಅಭಿವೃದ್ಧಿಗೆ ವಿಕಸಿತ ಬಿಹಾರ ಅತಿ ಮುಖ್ಯ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಎನ್‌ಡಿಎ ಕಾಳಜಿ ವಹಿಸಿದೆ ಎಂದು ಮೋದಿ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries