HEALTH TIPS

'ಉದಯಪುರ ಫೈಲ್ಸ್': ಕೇಂದ್ರದ ನಿರ್ಧಾರಕ್ಕಾಗಿ ಕಾಯಿರಿ; ನಿರ್ಮಾಪಕರಿಗೆ SC

ನವದೆಹಲಿ: 'ಉದಯಪುರ ಫೈಲ್ಸ್ - ಕನ್ಹಯ್ಯ ಲಾಲ್ ಟೈಲರ್ ಮರ್ಡರ್' ಚಿತ್ರದ ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿರುವ ಸುಪ್ರೀಂ ಕೋರ್ಟ್, ಚಿತ್ರದ ವಿರುದ್ಧ ಆಕ್ಷೇಪಣೆಗಳನ್ನು ಆಲಿಸಲು ಕೇಂದ್ರವು ನೇಮಿಸಿರುವ ಸಮಿತಿಯ ನಿರ್ಧಾರಕ್ಕಾಗಿ ಕಾಯುವಂತೆ ಚಲನಚಿತ್ರ ನಿರ್ಮಾಪಕರಿಗೆ ಸೂಚಿಸಿದೆ.

ಸಮಿತಿಯು ಇಂದು ಮಧ್ಯಾಹ್ನ 2:30ಕ್ಕೆ ಸಭೆ ಸೇರಲಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು, ಚಿತ್ರ ಬಿಡುಗಡೆ ಬಳಿಕ ಕನ್ಹಯ್ಯ ಲಾಲ್ ಟೈಲರ್ ಕೊಲೆ ಪ್ರಕರಣದ ಆರೋಪಿಗಳು ತಮ್ಮ ಮಾನಹಾನಿಗೆ ಪರಿಹಾರ ಕೋರಲು ಬರುವುದಿಲ್ಲ. ಆದರೆ, ಚಿತ್ರ ನಿರ್ಮಾಪಕರು ಪರಿಹಾರ ಕೋರಬಹುದು ಎಂದು ಹೇಳಿದೆ.

ಚಿತ್ರ ಬಿಡುಗಡೆಗೆ ತಡೆ ನೀಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಿರ್ಮಾಪಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಚಿತ್ರದ ಕುರಿತಂತೆ ವಾದಗಳನ್ನು ಆಲಿಸಿದ ನಂತರ ಸಮಯ ತೆಗೆದುಕೊಳ್ಳದೆ ತಕ್ಷಣವೇ ನಿರ್ಧಾರ ತೆಗೆದುಕೊಳ್ಳುವಂತೆ ಪೀಠವು ಕೇಂದ್ರದ ಸಮಿತಿಗೆ ಸೂಚಿಸಿದೆ.

ಜುಲೈ 11ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ, ಜುಲೈ 10 ರಂದು ದೆಹಲಿ ಹೈಕೋರ್ಟ್ ತಡೆ ನೀಡಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries