HEALTH TIPS

Vice President Election: ಚುನಾವಣಾಧಿಕಾರಿಯಾಗಿ ರಾಜ್ಯಸಭೆ ಕಾರ್ಯದರ್ಶಿ ನೇಮಕ

ನವವದೆಹಲಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ.

ಚುನಾವಣೆ ನಡೆಸಲು ರಾಜ್ಯಸಭೆಯ ಮುಖ್ಯಕಾರ್ಯದರ್ಶಿಯನ್ನು ಚುನಾವಣಾ ಅಧಿಕಾರಿಯನ್ನಾಗಿ ನೇಮಿಸಿದೆ.

ಸದ್ಯ ಪಿ.ಸಿ ಮೋದಿ ರಾಜ್ಯಸಭೆಯ ಕಾರ್ಯದರ್ಶಿಯಾಗಿದ್ದಾರೆ.

ಧನಕರ್ ಅವರು ಜುಲೈ 21 ರಂದು ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ.

'ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ' ಎಂದು ಅವರು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

74 ವರ್ಷದ ಧನಕರ್, ಆಗಸ್ಟ್ 2022 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries