ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ, ಶಕ್ತಿಪಂಚಾಕ್ಷರಿ ಯಾಗ ಆ, 15, 16, 17ರಂದು ಜರಗಲಿದೆ. ಪ್ರಸ್ತುತ ಜೀರ್ಣೋದ್ಧಾರ ಕಾರ್ಯಗಳು ಅಂತಿಮ ಹಂತದಲ್ಲಿದೆ. ಗರ್ಭಗುಡಿ ಹಾಗೂ ಒಳಾಂಗಣ ನವೀಕರಣ ಕೆಲಸಗಳಿಗೆ ಪೂರ್ವಭಾವಿಯಾಗಿ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ, ಶಕ್ತಿಪಂಚಾಕ್ಷರಿ ಯಾಗ ಕಾರ್ಯಕ್ರಮಗಳು ಬ್ರಹ್ಮಶ್ರೀ ರವೀಶತಂತ್ರಿ ಕುಂಟಾರು ಇವರ ನೇತೃತ್ವದಲ್ಲಿ ನಡೆಯಲಿದೆ.
ಕಾರ್ಯಕ್ರಮಗಳು:
ಅ. 15ರಂದು ಸಂಜೆ 6ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತುಪುಣ್ಯಾಹಂತ.
ಆ. 16ರಂದು ಶನಿವಾರ ಬೆಳಗ್ಗೆ 5ರಿಂದ ಗಣಪತಿ ಹೋಮ, ಪ್ರಾಯಶ್ಚಿತ್ತ ಹೋಮ, ಶಾಂತಿ ಹೋಮ, ತತ್ವಹೋಮ, ತತ್ವಕಲಶ ಪೂಜೆ, ಕುಂಭೇಶ ಕರ್ಕರಿ ಪೂಜೆ, ಶಯ್ಯಾಪೂಜೆ, ತತ್ವಕಲಶಾಭಿಷೇಕ, ಜೀವೋದ್ವಾಸನೆ, ಜೀವಕಲಶ, ಶಯ್ಯೋನ್ನಯನ, ಮಹಾಪೂಜೆ. ಸಂಜೆ 6 ರಿಂದ ಧ್ಯಾನಾಧಿವಾಸ, ಅವಾಸ ಹೋಮ, ಕುಂಭೇಶಕರ್ಕರಿ ಪೂಜೆ, ಪರಿಕಲಶ ಪೂಜೆ, ಬ್ರಹ್ಮಕಲಶ ಪೂಜೆ, ಮಹಾಪೂಜೆ. ಆ. 17 ರಂದು ಭಾನುವಾರ ಪ್ರಾತಃಕಾಲ 3 ಗಂಟೆಯಿಂದ ಗಣಪತಿ ಹೋಮ, ಪ್ರತಿಷ್ಠಾಪಾಣಿ, ಪ್ರಾತಃಕಾಲ 4.09 ರಿಂದ 4.45ರ ಕರ್ಕಟಕ ಲಗ್ನ ಸುಮುಹೂರ್ತದಲ್ಲಿ ಶ್ರೀದೇವರ ಬಾಲಾಲಯ ಪ್ರತಿಷ್ಠೆ, ಕಲಶಾಭಿಷೇಕ. ಬೆಳಗ್ಗೆ 9 ರಿಂದ ಶಕ್ತಿಪಂಚಾಕ್ಷರಿ ಯಾಗ ಆರಂಭ, 11.30ಕ್ಕೆ ಯಾಗ ಪೂರ್ಣಾಹುತಿ, 11.45ಕ್ಕೆ ಧಾರ್ಮಿಕ ಸಭೆ, ಮಧ್ಯಾಹ್ನ 12.30ಕ್ಕೆ ಶ್ರೀದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನದೊಂದಿಗೆ ಕಾರ್ಯಕ್ರಮ ಸಂಪನ್ನವಾಗಲಿದೆ.




.jpg)
.jpg)
