HEALTH TIPS

ಕಾರ್ತಿ ‍ಚಿದಂಬರಂ: ₹1 ಕೋಟಿ ಭದ್ರತಾ ಠೇವಣಿ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಸಂಸದ ಕಾರ್ತಿ ‍ಪಿ. ಚಿದಂಬರಂ ಅವರು ವಿದೇಶ ಪ್ರವಾಸಕ್ಕೆ ತೆರಳಲು, ನ್ಯಾಯಾಲಯದ ಸೂಚನೆಯಂತೆ 2022ರಲ್ಲಿ ಇರಿಸಿದ್ದ ₹1 ಕೋಟಿ ಭದ್ರತಾ ಠೇವಣಿ ಮೊತ್ತವನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್‌ ಗುರುವಾರ ಆದೇಶಿಸಿದೆ. 

ಏರ್‌ಸೆಲ್-ಮ್ಯಾಕ್ಸಿಸ್ ಹಾಗೂ ಐಎನ್‌ಎಕ್ಸ್‌ ಮೀಡಿಯಾ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕಾರ್ತಿ ಅವರು ಆರೋಪಿಯಾಗಿದ್ದಾರೆ.

ಈ ಎರಡೂ ಪ್ರಕರಣಗಳಲ್ಲಿ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಕಾರ್ತಿ ಅವರು ವಿದೇಶಕ್ಕೆ ತೆರಳಲು ಅನುಮತಿ ನೀಡಲು ₹1 ಕೋಟಿ ಮೊತ್ತದ ಭದ್ರತಾ ಠೇವಣಿ ಇಡುವಂತೆ ನ್ಯಾಯಾಲಯ 2022ರಲ್ಲಿ ಷರತ್ತು ವಿಧಿಸಿತ್ತು.

ಅದರಂತೆ ಠೇವಣಿ ಇರಿಸಿ, ಬಳಿಕ ವಿದೇಶ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಕಾರ್ತಿ ಅವರು ನಿಯಮದಂತೆ ತಮ್ಮ ಪಾಸ್‌ಪೋರ್ಟ್‌ ಅನ್ನು ತನಿಖಾಧಿಕಾರಿಗಳಿಗೆ ಹಸ್ತಾಂತರಿಸಿದ್ದರು.

ತಮ್ಮ ಠೇವಣಿಯನ್ನು ಹಿಂದಿರುಗಿಸುವಂತೆ 2023ರಲ್ಲಿ ಕಾರ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಉಜ್ಜಲ್ ಭುಯಾನ್ ಹಾಗೂ ಎನ್‌. ಕೋಟೀಶ್ವರ್ ಸಿಂಗ್ ಅವರಿದ್ದ ಪೀಠವು, ಬಡ್ಡಿಸಹಿತ ಸಂಪೂರ್ಣ ಮೊತ್ತವನ್ನು ಹಿಂದಿರುಗಿಸಲು ಆದೇಶಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries