HEALTH TIPS

ಭವಿಷ್ಯದ ಬಾಹ್ಯಾಕಾಶ ಯೋಜನೆಗಳಿಗೆ 40-50 ಗಗನಯಾನಿಗಳು ಬೇಕು; ಮೋದಿ

ನವದೆಹಲಿ: 20 ದಿನಗಳ ಬಾಹ್ಯಾಕಾಶಯಾನ ಮುಗಿಸಿ ಭೂಮಿಗೆ ಆಗಮಿಸಿದ ನಂತರ ಇದೀಗ ಭಾರತಕ್ಕೆ ಮರಳಿರುವ ಗಗನಯಾನಿ ಶುಭಾಂಶು ಶುಕ್ಲಾ ಅವರೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಭವಿಷ್ಯದ ಬಾಹ್ಯಾಕಾಶ ಯೋಜನೆಗಳನ್ನು ಮುನ್ನಡೆಸಲು 40-50 ಗಗನಯಾನಿಗಳ ಗುಂಪನ್ನು ಭಾರತ ನಿರ್ಮಿಸಬೇಕಾಗಿದೆ ಎಂದು ಹೇಳಿದ್ದಾರೆ.

ಆಕ್ಸಿಯಂ -4 ಮಿಷನ್‌ನ ವಾಣಿಜ್ಯ ಕಾರ್ಯಾಚರಣೆಯ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಪ್ರಯಾಣಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶುಕ್ಲಾ, ಭಾರತದ ಗಗನಯಾನ ಕಾರ್ಯಾಚರಣೆಯ ಬಗ್ಗೆ ಪ್ರಪಂಚದಾದ್ಯಂತ ಅಪಾರ ಆಸಕ್ತಿ ಇದೆ ಎಂದು ಪ್ರಧಾನಿಗೆ ತಿಳಿಸಿದರು.

ಶುಕ್ಲಾ ಸೋಮವಾರ ಸಂಜೆ ಮೋದಿ ಅವರನ್ನು ಭೇಟಿಯಾಗಿ ಐಎಸ್‌ಎಸ್‌ನಲ್ಲಿ ಕಳೆದ ಸಮಯ, ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವುದು ಮತ್ತು ಕಕ್ಷೆಯ ಪ್ರಯೋಗಾಲಯದಲ್ಲಿ ಅವರು ನಡೆಸಿದ ಪ್ರಯೋಗಗಳ ಅನುಭವಗಳನ್ನು ಹಂಚಿಕೊಂಡರು. ಸಂವಾದದ ವಿಡಿಯೊವನ್ನು ಮಂಗಳವಾರ ಬಿಡುಗಡೆ ಮಾಡಲಾಗಿದೆ.

ಭಾರತದ ಭವಿಷ್ಯದ ಕಾರ್ಯಾಚರಣೆಗಳಿಗೆ 40-50 ಗಗನಯಾನಿಗಳ ಗುಂಪನ್ನು ಸಿದ್ಧಪಡಿಸುವ ಅವಶ್ಯಕತೆ ಇದೆ. ಶುಕ್ಲಾ ಅವರ ಬಾಹ್ಯಾಕಾಶ ಪ್ರಯಾಣವು ಭವಿಷ್ಯದ ಕಾರ್ಯಾಚರಣೆಗಳಿಗೆ ಮೊದಲ ಹೆಜ್ಜೆಯಾಗಿದೆ ಎಂದು ಮೋದಿ ಬಣ್ಣಿಸಿದರು.

ಶುಕ್ಲಾ ಅವರ ಬಾಹ್ಯಾಕಾಶಯಾನವು ಈ ವಲಯದಲ್ಲಿ ಹೆಚ್ಚಿನ ನಂಬಿಕೆ ಮತ್ತು ಆಸಕ್ತಿಯನ್ನು ಹುಟ್ಟುಹಾಕಿದೆ ಎಂದು ಮೋದಿ ಹೇಳಿದರು.

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಮತ್ತು ಗಗನಯಾನ ಯೋಜನೆಗಳನ್ನು ಭಾರತ ಹೊಂದಿದೆ. ಶುಕ್ಲಾ ಅವರ ಅನುಭವವು ಈ ಪ್ರಯತ್ನಗಳಲ್ಲಿ ಹೆಚ್ಚಿನ ಮೌಲ್ಯವನ್ನು ಹೊಂದಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಚಂದ್ರಯಾನ-II ನಂತಹ ಹಿನ್ನಡೆಗಳ ಹೊರತಾಗಿಯೂ, ಈ ಎರಡು ಯೋಜನೆಗಳು ದೇಶಕ್ಕೆ ಒಂದು ಪ್ರಮುಖ ಅವಕಾಶವನ್ನು ಒದಗಿಸಿವೆ. ಬಾಹ್ಯಾಕಾಶ ವಲಯಕ್ಕೆ ಸರ್ಕಾರದ ನಿರಂತರ ಬದ್ಧತೆಯು ಶ್ಲಾಘನೀಯ ಎಂದು ಶುಕ್ಲಾ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries