HEALTH TIPS

Bihar Voter Adhikar Yatra: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ

ಪಟ್ನಾ: ಬಿಹಾರದ ಪಟ್ನಾದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಇಂದು (ಶುಕ್ರವಾರ) ಸಂಘರ್ಷ ಉಂಟಾಗಿದೆ. 

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಮತದಾರರ ಅಧಿಕಾರ ಯಾತ್ರೆ'ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ದಿವಂಗತ ತಾಯಿಯ ವಿರುದ್ಧ ನಿಂದನಾತ್ಮಕ ಪದ ಬಳಕೆ ಮಾಡಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸಚಿವರಾದ ನಿತಿನ್ ನಬಿನ್, ಸಂಜಯ್ ಸರಾವ್ಗಿ ಸೇರಿದಂತೆ ಹಿರಿಯ ನಾಯಕರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸದಾಕತ್ ಅಶ್ರಮದ ಕಾಂಗ್ರೆಸ್ ಕಚೇರಿಗೆ ಧರಣಿ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

'ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಡಿದ ಅವಮಾನವನ್ನು ನಾವು ಸಹಿಸಿಕೊಳ್ಳುವುದಿಲ್ಲ. ರಾಹುಲ್ ಗಾಂಧಿ ಹಾಗೂ ಅವರ ಬೆಂಬಲಿಗರು ದೇಶದ ಕ್ಷಮೆಯಾಚಿಸಬೇಕು' ಎಂದು ನಬಿನ್ ಆಗ್ರಹಿಸಿದ್ದಾರೆ.

ಘರ್ಷಣೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

'ಇದೊಂದು ಸಣ್ಣ ಘರ್ಷಣೆಯಾಗಿದ್ದು, ಎರಡೂ ಕಡೆಯ ಕಾರ್ಯಕರ್ತರು ಗಾಯಗೊಂಡಿರುವ ಬಗ್ಗೆ ನಮಗೆ ದೂರುಗಳು ಲಭಿಸಿವೆ. ಪ್ರಕರಣದ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಟ್ನಾ (ಕೇಂದ್ರ) ವರಿಷ್ಠಾಧಿಕಾರಿ' ದೀಕ್ಷಾ ತಿಳಿಸಿದ್ದಾರೆ.

ಬಿಜೆಪಿ ಗೂಂಡಾಗಿರಿಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಸಹ ಬಿಜೆಪಿಯ ಕೃತ್ಯವನ್ನು ಖಂಡಿಸಿದ್ದು, 'ಅಸತ್ಯ ಹಾಗೂ ಅಹಿಂಸೆಯ ಮುಂದೆ ಹಿಂಸೆ ಗೆಲ್ಲಲು ಸಾಧ್ಯವಿಲ್ಲ. ಸಂವಿಧಾನ ರಕ್ಷಣೆಯ ಹೋರಾಟ ಮುಂದುವರಿಯಲಿದೆ' ಎಂದಿದ್ದಾರೆ.

ಪಟ್ನಾ: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries