HEALTH TIPS

ಅತ್ಯಾಚಾರ ಪ್ರಕರಣ | ರ‍್ಯಾಪರ್ ವೇಡನ್‌ ಪರಾರಿಯಾಗಿಲ್ಲ: ಕೇರಳ ಪೊಲೀಸ್‌

ಕೊಚ್ಚಿ: '‌ರ‍್ಯಾಪರ್ ಹಿರಣ್‌ದಾಸ್‌ ಮುರಳಿ ಅಲಿಯಾಸ್ ವೇಡನ್‌ ತಲೆಮರೆಸಿಕೊಂಡಿಲ್ಲ, ಆತ ಇರುವ ಸ್ಥಳದ ಬಗ್ಗೆ ನಿಗಾ ಇಡಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಆರೋಪದಲ್ಲಿ ವೇಡನ್‌ ಮೇಲೆ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೊಚ್ಚಿ ನಗರ ಪೊಲೀಸ್ ಆಯುಕ್ತ ಪುಟ್ಟ ವಿಮಲಾದಿತ್ಯ, 'ವೇಡನ್‌ ಮೇಲೆ ನಿಗಾ ಇಟ್ಟಿದ್ದೇವೆ. ಅವರು ಪರಾರಿಯಾಗಿಲ್ಲ' ಎಂದು ಸ್ಪಷ್ಟನೆ ನೀಡಿದ್ದಾರೆ.

'ಪ್ರಕರಣಕ್ಕೆ ಸಂಬಂಧಿಸಿದಂತೆ ವೇಡನ್‌ ಅವರು ಕೇರಳ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅದು ವಿಚಾರಣೆಗೆ ಬರುವವರೆಗೂ ತನಿಖಾ ಪ್ರಕ್ರಿಯೆಯು ಮುಂದುವರಿಯುತ್ತದೆ' ಎಂದು ಹೇಳಿದ್ದಾರೆ.

ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸುವುದು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಸಂಗ್ರಹಿಸುವುದು ಮುಂದುವರಿಯುತ್ತದೆ ಎಂದೂ ತಿಳಿಸಿದ್ದಾರೆ.

ಮಾದಕವಸ್ತು ಹೊಂದಿರುವುದಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ವೇಡನ್‌ ಅವರನ್ನು ಪೊಲೀಸರು ಬಂಧಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries