HEALTH TIPS

ಆಂಧ್ರಪ್ರದೇಶ | ಗ್ರಾನೈಟ್‌ ಕ್ವಾರಿಯಲ್ಲಿ ಬಂಡೆ ಕುಸಿತ; ಆರು ಮಂದಿ ಸಾವು

ಹೈದರಾಬಾದ್‌: ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯ ಗ್ರಾನೈಟ್‌ ಕ್ವಾರಿಯಲ್ಲಿ ಭಾರಿ ಗಾತ್ರದ ಕಲ್ಲು ಕಾರ್ಮಿಕರ ಮೇಲೆ ಉರುಳಿಬಿದ್ದು ಒಡಿಶಾ ಮೂಲದ ಆರು ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಎಂಟು ಮಂದಿಗೆ ಗಂಭೀರ ಗಾಯಗಳಾಗಿವೆ.

'ಭಾನುವಾರ ಬೆಳಗ್ಗೆ 10.30ರ ಸುಮಾರಿಗೆ ಬಲ್ಲಿಕುರವ ಸಮೀಪದ ಸತ್ಯಕೃಷ್ಣ ಕ್ವಾರಿಯ ಒಂದು ಪಾರ್ಶ್ವ ನೀರು ಜಿನುಗಿದ ಕಾರಣ ಕುಸಿದು ಬಿದ್ದಿತ್ತು.

ಈ ವೇಳೆ ಕೆಲಸ ಮಾಡುತ್ತಿದ್ದ 16 ಮಂದಿ ಮೇಲೆ ಬಂಡೆಗಲ್ಲು ಬಿದ್ದಿದ್ದವು. ಗಂಭೀರ ಗಾಯಗೊಂಡವರನ್ನು ನರಸರಾವ್‌ಪೇಟ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವಶೇಷಗಳ ಅಡಿಯಿಂದ ಮೃತದೇಹ ಮೇಲಕ್ಕೆತ್ತಿ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಬಾಪಟ್ಲ ಜಿಲ್ಲಾಧಿಕಾರಿ ವೆಂಕಟ ಮುರಳಿ, ಎಸ್‌ಪಿ ತುಶಿರ್‌ ಡುಡಿ ತಿಳಿಸಿದ್ದಾರೆ.

ಘಟನೆಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತಪಡಿಸಿ, ತನಿಖೆಗೆ ಆದೇಶಿಸಿದ್ದಾರೆ. ಕ್ವಾರಿಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ ಎಂಬ ಬಗ್ಗೆ ಗಣಿ ಇಲಾಖೆ ಅಧಿಕಾರಿಗಳು, ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ.

'ತಮ್ಮ ಕುಟುಂಬಗಳಿಗಾಗಿ ಶ್ರಮಿಸುತ್ತಿದ್ದ ವಲಸೆ ಕಾರ್ಮಿಕರು ಈ ರೀತಿ ಮೃತಪಟ್ಟಿರುವುದು ನಿಜಕ್ಕೂ ಹೃದಯ ವಿದ್ರಾವಕ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ನೆರವು ಒದಗಿಸಬೇಕು ಮತ್ತು ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು' ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಆಗ್ರಹಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries