HEALTH TIPS

ಎಸ್‌ಐಆರ್‌ ಕುರಿತು ವಿಸ್ತೃತ ಚರ್ಚೆಗೆ ವಿರೋಧ ಪಕ್ಷಗಳ ಒತ್ತಾಯ: ನಡೆಯದ ಕಲಾಪ

ನವದೆಹಲಿ: ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ವಿಸ್ತೃತ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದ್ದರಿಂದ ಇಡೀ ದಿನ ಸದನ ಕಲಾಪ ನಡೆಯಲಿಲ್ಲ.

ಲೋಕಸಭೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಸದನ ಆರಂಭಗೊಳ್ಳುತ್ತಿದ್ದಂತೆಯೇ, ಸದಸ್ಯರು ಘೋಷಣೆ ಕೂಗಿ, ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಸದನ ನಡೆಸಲು ಅವಕಾಶ ನೀಡಬೇಕು ಎಂದು ಕೋರಿ ಸ್ಪೀಕರ್‌ ಓಂ ಬಿರ್ಲಾ ಅವರು ಮನವಿ ಮಾಡಿದರು. ಆದರೂ, ಸದಸ್ಯರು ಘೋಷಣೆ ಕೂಗುವುದನ್ನು ಮುಂದುವರಿಸಿದರು. ಇದರಿಂದ ಪ್ರಶ್ನೋತ್ತರ ಅವಧಿಗೆ ತೊಂದರೆ ಉಂಟಾಯಿತು. ಹೀಗಾಗಿ, ಕಲಾಪವನ್ನು ಮಧ್ಯಾಹಕ್ಕೆ ಮುಂದೂಡಲಾಯಿತು.

ಮಧ್ಯಾಹ್ನ 2 ಗಂಟೆಗೆ ಸದನ ಆರಂಭಗೊಂಡರೂ, ಸದಸ್ಯರು ಘೋಷಣೆಗಳನ್ನು ಕೂಗುವುದನ್ನು ಮುಂದುವರಿಸಿದರು. ಇದರ ಮಧ್ಯೆಯೇ, ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಮೀಸಲಾತಿ ನೀಡುವ ಕುರಿತ ಮಸೂದೆ ಮಂಡಿಸಲು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಮುಂದಾದರು. ಆದರೆ, ವಿರೋಧ ಪಕ್ಷಗಳು ಘೋಷಣೆಗಳನ್ನು ಮುಂದುವರಿಸಿದರು. ಹೀಗಾಗಿ ಸದನವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಕೆಲವು ಸದಸ್ಯರು ಸಭಾಪತಿಗಳ ಪೀಠದ ಬಳಿ ಧಾವಿಸಲು ಮುಂದಾದರು. ಇದಕ್ಕೆ ಮಾರ್ಷಲ್‌ಗಳು ಅವಕಾಶ ನೀಡಲಿಲ್ಲ. ಇದಕ್ಕೆ ಕೆಲವು ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇಡೀ ಸದನವನ್ನು 'ಅರೆ ಸೇನಾ ಪಡೆಗಳು' ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿವೆ ಎಂದು ದೂರಿದರು.

ಇದರಿಂದ ಸದನವನ್ನು ಕೆಲಕಾಲ ಮುಂದೂಡಲಾಯಿತು. ಮಧ್ಯಾಹ್ನ 12 ಗಂಟೆ ವೇಳೆಗೆ ಸದನ ಪುನಃ ಆರಂಭಗೊಂಡ ವೇಳೆ ಟಿಎಂಸಿ, ಡಿಎಂಕೆ ಸಂಸದರು ಮತ್ತೆ ಪೀಠದ ಮುಂಭಾಗಕ್ಕೆ ನುಗ್ಗಲು ಯತ್ನಿಸಿದರು. ಪ್ರವೇಶ ದ್ವಾರದಲ್ಲಿಯೇ ಭದ್ರತಾ ಸಿಬ್ಬಂದಿ ತಡೆದರು. ಆದರೂ, ಕೆಲವು ಮಹಿಳಾ ಸಂಸದರು ಒಳಗಡೆ ನುಗ್ಗಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries