HEALTH TIPS

ದೀರ್ಘ ಸಂಘರ್ಷಗಳಿಗೆ ಸಶಸ್ತ್ರ ಪಡೆಗಳು ಸಿದ್ಧವಾಗಿರಬೇಕು: ರಾಜನಾಥ್ ಸಿಂಗ್

ಮೊವ್ : ಅನಿರೀಕ್ಷಿತ ಭೌಗೋಳಿಕ ರಾಜಕೀಯವನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಸೇನೆಯು ಅಲ್ಪಾವಧಿ ಸಂಘರ್ಷಗಳಿಂದ ಹಿಡಿದು ಐದು ವರ್ಷಗಳ ದೀರ್ಘ ಯುದ್ಧಕ್ಕೂ ಸಿದ್ಧವಾಗಿರಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ. 

ಮೊವ್‌ನ ಸೇನಾ ತರಬೇತಿ ಕಾಲೇಜಿನಲ್ಲಿ ಜರುಗಿದ 'ರಣ್ ಸಂವಾದ' ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಭಾರತ ಯಾರ ಭೂಮಿಯನ್ನು ಕೂಡ ಬಯಸುವುದಿಲ್ಲ. ಆದರೆ, ತನ್ನ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಯಾವುದೇ ಮಟ್ಟಕ್ಕೆ ಹೋಗಲು ಸಿದ್ಧವಾಗಿದೆ. ಎಲ್ಲಾ ರೀತಿಯ ಭದ್ರತಾ ಸವಾಲುಗಳನ್ನು ಎದುರಿಸಲು ಸೇನೆ ಸಿದ್ಧವಾಗಿರಬೇಕು ಎಂದು ತಿಳಿಸಿದ್ದಾರೆ.

'ಆಪರೇಷನ್ ಸಿಂಧೂರ' ಕಾರ್ಯಚರಣೆಯು ಭಾರತದ ಸ್ಥಳೀಯ ವೇದಿಕೆಗಳು, ಉಪಕರಣಗಳು ಹಾಗೂ ಶಸ್ತ್ರಾಸ್ತ್ರ ವ್ಯವಸ್ಥೆಗಳ ಯಶಸ್ಸಿಗೆ ಉತ್ತಮ ಉದಾಹರಣೆಯಾಗಿದೆ ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಸಿಡಿಎಸ್ ಅನಿಲ್ ಚೌಹಾಣ್, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಎ.ಪಿ. ಸಿಂಗ್ ಮತ್ತು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಸೇರಿದಂತೆ ಇತರ ಪ್ರಮುಖ ಸೇನಾ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries