ತಲಪಾಡಿಯ ಅಬ್ದುಲ್ ಹಮೀದ್ (48) ಮೃತಪಟ್ಟವರು. ಸ್ಕೂಟರ್ ಚಲಾಯಿಸಿದ ಅಜೀಸ್ ಅಹಮ್ಮದ್ ( 41) ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಲಪಾಡಿ ಕಡೆಯಿಂದ ಉಪ್ಪಳಕ್ಕೆ ಬರುತ್ತಿದ್ದ ಸ್ಕೂಟರ್ ಮತ್ತು ಎದುರಿನಿಂದ ಬರುತ್ತಿದ್ದ ಕಾರು ಢಿಕ್ಕಿಯಾಗಿ ಅಪಘಾತ ನಡೆದಿದೆ.
ಗಂಭೀರ ಗಾಯಗೊಂಡ ಹಮೀದ್ ರನ್ನು ಉಪ್ಪಳದ ಆಸ್ಪತ್ರೆಗೆ ತಲಪಿದರೂ ಜೀವ ಉಳಿಸಲಾಗಲಿಲ್ಲ.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.




