HEALTH TIPS

ಬುಡಕಟ್ಟು ಜನಾಂಗದವರ ಹೋರಾಟದ ಹಾದಿಗೆ ಸ್ಫೂರ್ತಿ ಶಿಬು ಸೊರೇನ್: ಅಮಿತ್‌ ಶಾ

ನವದೆಹಲಿ: ಶಿಬು ಸೊರೇನ್ ಅವರು ಜಾರ್ಖಂಡ್‌ ಬುಡಕಟ್ಟು ಜನಾಂಗದವರ ಹಕ್ಕುಗಳಿಗಾಗಿ ಹಾಗೂ ಸಬಲೀಕರಣಕ್ಕಾಗಿ ದಶಕಗಳ ಕಾಲ ದಿಟ್ಟವಾಗಿ ಹೋರಾಟ ನಡೆಸಿದ ನಾಯಕ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಸ್ಥಾಪಕ, ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಇಂದು (ಸೋಮವಾರ) ನಿಧನರಾದರು.

ಧೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶಿಬು ಅವರಿಗೆ 81 ವರ್ಷ ವಯಸ್ಸಾಗಿತ್ತು.

ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಅಮಿತ್‌ ಶಾ, ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

'ತಮ್ಮ ಸರಳ ವ್ಯಕ್ತಿತ್ವ ಮತ್ತು ವಿನಮ್ರ ಸ್ವಭಾವದಿಂದಲೇ ಅವರು ಜನಸಾಮಾನ್ಯರೊಂದಿಗೆ ಸಂಪರ್ಕ ಹೊಂದಿದ್ದರು' ಎಂದು ಅಮಿತ್‌ ಶಾ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಬುಡಕಟ್ಟು ಜನಾಂಗದವರ ಏಳ್ಗೆಗಾಗಿ ಅವರ ಸಬಲೀಕರಣಕ್ಕಾಗಿ ದಶಕಗಳ ಕಾಲ ಹೋರಾಟದ ಹಾದಿಯಲ್ಲೇ ಸಾಗಿದ್ದ ಅವರು, ಜಾರ್ಖಂಡ್‌ ಪ್ರತ್ಯೇಕ ರಾಜ್ಯ ರಚನೆಗೆ ಶ್ರಮಿಸಿದ್ದರು. ಶಿಬು ನಾಲ್ಕು ದಶಕಗಳ ಕಾಲ ಸುಧೀರ್ಘ ರಾಜಕೀಯದಲ್ಲಿ ತೊಡಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries