HEALTH TIPS

ಮುಜುಂಗಾವು ವಿದ್ಯಾಪೀಠದಲ್ಲಿ ಸಂಭ್ರಮದ ಓಣಂ ಆಚರಣೆ

ಕುಂಬಳೆ: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ಓಣಂ ಹಬ್ಬ ಹಾಗೂ ಅಧ್ಯಾಪಕರ ದಿನವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಹೂವಿನ ರಂಗೋಲಿಯನ್ನು ರಚಿಸಿದರು. ವಿದ್ಯಾರ್ಥಿಗಳು ಹಾಗೂ ಅಧ್ಯಾಪಕವೃಂದ ಕೇರಳದ ಸಾಂಪ್ರದಾಯಿಕ ಉಡುಗೆಯೊಂದಿಗೆ  ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಓಣಂನ ವಿಶೇಷ ಔತಣಕೂಟವನ್ನು ಆಯೋಜಿಸಲಾಗಿತ್ತು. ಭೋಜನದ ನಂತರ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅಧ್ಯಾಪಕ ದಿನದ ಅಂಗವಾಗಿ ಅಧ್ಯಾಪಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದರು. 


ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಓಣಂ ಹಬ್ಬಾಚರಣೆಯ ಹಿನ್ನೆಲೆಯನ್ನು  ವಿದ್ಯಾರ್ಥಿಗಳಿಗೆ ವಿವರಿಸಿದರು. ಮುಖ್ಯ ಶಿಕ್ಷಕ ಶ್ಯಾಮ್ ಭಟ್ ದರ್ಬೆಮಾರ್ಗ ಮಕ್ಕಳಿಗೆ ಓಣಂ ಶುಭಾಶಯ ಹೇಳಿದರು.


ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಎಚ್. ಎಸ್ ಪ್ರಸಾದ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉದಯಕುಮಾರ್ ಮಾಯಿಪ್ಪಾಡಿ ಹಾಗೂ ರಕ್ಷಕರು, ಅಧ್ಯಾಪಕ ವೃಂದ ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries