HEALTH TIPS

ಮತ ಕಳ್ಳತನ: ಬ್ಯಾರಿಕೇಡ್ ಹಾರಿದ ಅಖಿಲೇಶ್, ಬಸ್ಸಿನಲ್ಲಿ ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: 'ಮತ ಕಳ್ಳತನ' ಆರೋಪಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸಂಸದರು ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿವರೆಗೆ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಬ್ಯಾರಿಕೇಡ್ ಹಾರಿರುವ ಘಟನೆ ನಡೆದಿದೆ. 

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ 'ಇಂಡಿಯಾ' ಮೈತ್ರಿಕೂಟದ ನಾಯಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನಾ ಮೆರವಣಿಗೆಯನ್ನು ದೆಹಲಿ ಪೊಲೀಸರು ಬ್ಯಾರಿಕೇಡ್ ಬಳಸಿ ತಡೆದಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನೂಕುನುಗ್ಗಲು ಉಂಟಾಗಿತ್ತು.

ಬಸ್ಸಿನಲ್ಲಿ ಪ್ರತಿಭಟಿಸಿದ ಪ್ರಿಯಾಂಕಾ...

ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಸ್ಸಿನಲ್ಲಿಯೇ ಕುಳಿತುಕೊಂಡು ಪ್ರಿಯಾಂಕಾ ಪ್ರತಿಭಟಿಸುತ್ತಿರುವ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries