HEALTH TIPS

ಮತ ಕಳವು ಆರೋಪ | ಚುನಾವಣಾ ಆಯೋಗ ಸಮಗ್ರ ತನಿಖೆ ನಡೆಸಲಿ: ಶರದ್‌ ಪವಾರ್‌

ನಾಗಪುರ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮಾಡಿರುವ 'ಮತ ಕಳವು' ಆರೋಪದ ಕುರಿತು ಚುನಾವಣಾ ಆಯೋಗವು ಸಮಗ್ರ ತನಿಖೆ ನಡೆಸಬೇಕು ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್‌ ಪವಾರ್‌ ಒತ್ತಾಯಿಸಿದ್ದಾರೆ.

'ಮತ ಕಳವು ಕುರಿತ ರಾಹುಲ್‌ ಗಾಂಧಿ ಅವರು ಮಂಡಿಸಿರುವ ವಿವರಗಳು ಉತ್ತಮ ಸಂಶೋಧನೆಯಿಂದ ಕೂಡಿವೆ.

ಚುನಾವಣಾ ಪ್ರಕ್ರಿಯೆಯ ಸಮಗ್ರತೆ ಹಾಗೂ ಅದರ ಕಾವಲುಗಾರನ ಕುರಿತು ಜನರಿಗೆ ಮೂಡಿರುವ ಅನುಮಾನಗಳನ್ನು ಹೋಗಲಾಡಿಸುವ ಅಗತ್ಯವಿದೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂಬ ಭರವಸೆ ಇದೆ' ಎಂದು ಸುದ್ದಿಗಾರರಿಗೆ ಶನಿವಾರ ತಿಳಿಸಿದ್ದಾರೆ.

'ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗವು ರಾಹುಲ್‌ ಗಾಂಧಿ ಅವರಿಂದ ಪ್ರತ್ಯೇಕ ಪ್ರಮಾಣಪತ್ರವನ್ನು ಕೇಳಬಾರದು. ಅವರು ಈ ಬಗ್ಗೆ ಸಂಸತ್ತಿನಲ್ಲೂ ಹೇಳಿದ್ದರು' ಎಂದು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries