HEALTH TIPS

ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ ವಿಭಜನೆ ಭೀತಿ ದಿನ ಆಚರಣೆ: ಘರ್ಷಣೆ- ರಾಜ್ಯಪಾಲರ ಪ್ರತಿಕೃತಿ ದಹಿಸಿ ಎಸ್‍ಎಫ್‍ಐ ಪ್ರತಿಭಟನೆ

ಕಾಸರಗೋಡು: ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ ನೇತೃತ್ವದಲ್ಲಿ ನಿನ್ನೆ ನಡೆದ ವಿಭಜನೆ ಭೀತಿ ದಿನದಲ್ಲಿ ಎಸ್‍ಎಫ್‍ಐ-ಎಬಿವಿಪಿ ಘರ್ಷಣೆ ನಡೆದಿರುವುದು ವರದಿಯಾಗಿದೆ.

ದಿನಾಚರಣೆಯ ಭಾಗವಾಗಿ, ಎಬಿವಿಪಿ ಕಾರ್ಯಕರ್ತರು ಫಲಕಗಳನ್ನು ಹಿಡಿದಿದ್ದು, ಎಸ್‍ಎಫ್‍ಐ ಕಾರ್ಯಕರ್ತರು ಸಹ ಪ್ರತಿಭಟಿಸಿದರು.

ಕಾಲೇಜಿನಲ್ಲಿ ಎಬಿವಿಪಿ ಕಾರ್ಯಕರ್ತರು ಹಾಕಿದ್ದ ಪೋಸ್ಟರ್‍ಗಳು ಮತ್ತು ಫಲಕಗಳನ್ನು ಎಸ್‍ಎಫ್‍ಐ ಕಾರ್ಯಕರ್ತರು ಹರಿದು ಹಾಕಿದರು. ನಂತರ ಅವರು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರ ಪ್ರತಿಕೃತಿಯನ್ನು ಸುಟ್ಟುಹಾಕಿದರು.

ಘರ್ಷಣೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಸ್ಥಳದಲ್ಲಿ ಪೋಲೀಸ್ ತುಕಡಿಯನ್ನು ನಿಯೋಜಿಸಲಾಗಿದೆ. ಆಗಸ್ಟ್ 14 ರಂದು ವಿಭಜನೆ ಭೀತಿ ದಿನವನ್ನು ಆಚರಿಸಬೇಕೆಂದು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಮೊನ್ನೆ ಸುತ್ತೋಲೆ ಹೊರಡಿಸಿದ್ದರು. ಉನ್ನತ ಶಿಕ್ಷಣ ಸಚಿವರು ಅದನ್ನು ನಡೆಸಬಾರದು ಎಂದು ಸುತ್ತೋಲೆ ಹೊರಡಿಸಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries