ಬದಿಯಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆ ಕಾಸರಗೋಡು ತಾಲೂಕು ಬದಿಯಡ್ಕ ವಲಯ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ, ಮಾದಕ ವಸ್ತುಗಳ ದುಷ್ಪರಿಣಾಮ ಎಂಬ ವಿಷಯದಲ್ಲಿ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಶಾಲೆಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ಜರಗಿತು.
ನಿವೃತ್ತ ಅಧ್ಯಾಪಕ ಚಂದ್ರಹಾಸ ನಂಬ್ಯಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳು ಮಾದಕ ವಸ್ತುಗಳ ಜಾಲಕ್ಕೆ ಬಲಿಯಾಗದೆ, ಇದರಿಂದ ದೂರ ಉಳಿದು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದಲ್ಲದೆ ಸಮಾಜದ ಮುಂಪಕ್ತಿಯಲ್ಲಿ ನಿಲ್ಲಬೇಕು. ಇಂತಹ ಉದ್ದೇಶವನ್ನಿಟ್ಟುಕೊಂಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸ್ವಾಸ್ಥ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ ಎಂದರು.
ಜನಜಾಗೃತಿ ವೇದಿಕೆ ಕಾಸರಗೋಡು ತಾಲೂಕು ಸಮಿತಿ ಅಧ್ಯಕ್ಷ ಅಖಿಲೇಶ್ ನಗುಮುಗಂ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಡೆಪ್ಯುಟಿ ತಹಶೀಲ್ದಾರ್ ನಾರಾಯಣ ಗೋಸಾಡ ಮಕ್ಕಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ತರಗತಿ ನೀಡಿ ಮಕ್ಕಳು ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಸಮಾಜಕ್ಕೆ ಹಾಗೂ ಕುಟುಂಬಕ್ಕೆ ಮಾದರಿಯಾಗಬೇಕು. ದುಶ್ಚಟವನ್ನು ರೂಢಿಸಿಕೊಂಡರೆ ಆ ಜಾಲದಿಂದ ಹೊರ ಬರುವುದು ಕಷ್ಟ ಎಂದು ಎಚ್ಚರಿಸಿದರು. ಕುಂಬ್ಡಾಜೆ ಗ್ರಾ.ಪಂ. ಸದಸ್ಯ ಹರೀಶ್ ಗೋಸಾಡ, ಮುಖ್ಯೋಪಾಧ್ಯಾಯ ಗಿರೀಶ್ ಎನ್, ಮೇಲ್ವಿಚಾರಕಿ ಸುಗುಣ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಕಮಲಾಕ್ಷಿ ಸ್ವಾಗತಿಸಿ, ಸುನಿತ ವಂದಿಸಿದರು.




.jpg)
