HEALTH TIPS

ಗಣೇಶ್ ಕಾಸರಗೋಡು ಅವರಿಗೆ ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ

ಕಾಸರಗೋಡು: ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ವತಿಯಿಂದ ಕೊಡಮಾಡುವ "ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2025."ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಾಹಿತಿ ಗಣೇಶ್ ಕಾಸರಗೋಡು ಆಯ್ಕೆಯಾಗಿದ್ದಾರೆ. ಆಗಸ್ಟ್ 27ರಂದು ಸಂಜೆ 5ಕ್ಕೆ ಕಾಸರಗೋಡು ನುಳ್ಳಿಪ್ಪಾಡಿಯ "ಸೀತಮ್ಮ ಪುರುಷನಾಯಕ ಸ್ಮಾರಕ ಸಭಾ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ ರಾವ್ ಬೇಕಲ್ ಸಮಾರಂಭ ಉದ್ಘಾಟಿಸುವರು. ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ನಿರ್ದೇಶಕ ಡಾ. ವೆಂಕಟ್ರಮಣ ಹೊಳ್ಳ ಅಧ್ಯಕ್ಷತೆ ವಹಿಸುವರು. ಹಿರಿಯ ಸಾಹಿತಿ ರಾಧಾಕೃಷ್ಣ ಉಳಿಯತಡ್ಕ ಗಣೇಶ್ ಕಾಸರಗೋಡು ಅವರ ಬಗ್ಗೆ ಮಾತನಾಡುವರು. ಪತ್ರಕರ್ತ ಪ್ರದೀಪ್ ಬೇಕಲ್ ಉಪಸ್ಥಿತರಿರುವರು ಎಂದು ಕನ್ನಡ ಭವನ ಸಂಚಾಲಕಿ ಸಂದ್ಯಾ ರಾಣಿ ಟೀಚರ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries