HEALTH TIPS

ಧರ್ಮಸ್ಥಳ ಭಜನಾ ಕಮ್ಮಟ-ಕಾಸರಗೋಡಿನಲ್ಲಿ ಪೂರ್ವಭಾವಿ ಸಭೆ

ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ  ಭಜನಾ ಪರಿಷತ್  ನೇತೃತ್ವದಲ್ಲಿ ಸೆ.14ರಿಂದ 21ರ ವರೆಗೆ ಧರ್ಮಸ್ಥಳದಲ್ಲಿ  ಜರಗಲಿರುವ 27ನೇ ವರುಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ  ಕಾಸರಗೋಡು ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನದಲ್ಲಿ ಜರಗಿತು.

ಶ್ರೀ.ಕ್ಷೇ. ಧ.ಗ್ರಾ.ಯೋಜನೆಯ ದ.ಕ.ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಸಮಾರಂಭ ಉದ್ಘಾಟಿಸಿದರು. ಭಜನಾ ಪರಿಷತ್ ಕಾಸರಗೋಡು ವಲಯ ಅಧ್ಯಕ್ಷರಾದ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಭಜನಾ ಪರಿಷತ್ ಗೌರವಧ್ಯಕ್ಷ  ಜಯಾನಂದ ಕುಮಾರ್ ಹೊಸದುರ್ಗ ಭಜನೆಯ ಮಹತ್ವದ ಬಗ್ಗೆ ವಿಷಯ ವ್ಯಕ್ತಪಡಿಸಿದರು. ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪೇಟೆ ವೆಂಕಟ್ರಮಣ ಬಾಲಗೋಕುಲದ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಯೋಜನಾಧಿಕಾರಿ ದಿನೇಶ್ ಸ್ವಾಗತಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸೌಮ್ಯ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries