ಉಪ್ಪಳ: ಕೇರಳ ಸರ್ಕಾರದ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ (ಕೆ.ಡಿ.ಪಿ) ಯಡಿಯಲ್ಲಿ ಮುಳಿಂಜ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ರ ಶಿಫಾರಸಿನ ಮೇಲೆಗೆ ಅನುಮೋದಿಸಿದ ಒಂದೂವರೆ ಕೋಟಿಯ ನೂತನ ಶಾಲಾ ಕಟ್ಟಡ ಶಿಲಾನ್ಯಾಸ ಆ. 14 ರಂದು ಗುರುವಾರ ನಡೆಯಲಿದೆ. ಮಂಗಲ್ಪಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರುಬಿನ ನೌಫಲ್ ಅವರ ಅಧ್ಯಕ್ಷತೆಯಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ. ಆಶ್ರಫ್ ಉದ್ಘಾಟಿಸುವರು.
ಕಾರ್ಯಕ್ರಮದಲ್ಲಿ ಕಾಸರಗೋಡು ಕೆ.ಡಿ.ಪಿಯ ವಿಶೆಷಾಧಿಕಾರಿ ಚಂದ್ರನ್. ವಿ. ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಲೋಕೋಪಯೋಗಿ ಇಲಾಖೆ ಅಭಿಯಂತ ಜಗದೀಶ್.ಎಂ. ವರದಿ ವಾಚಿಸಲಿರುವರು. ಬ್ಲಾಕ್ ಪಂಚಾಯತಿ ಅಧ್ಯಕ್ಷೆ ಶಮೀನಾ ಟೀಚರ್, ಕಾಸರಗೋಡು ಜಿಲ್ಲಾ ಪಂಚಾಯತಿ ಸದಸ್ಯ ಗೋಲ್ಡನ್ ರಹಮಾನ್, ಮಂಗಲ್ಪಾಡಿ ಗ್ರಾ.ಪಂ.ಉಪಾಧ್ಯಕ್ಷ ಯೂಸುಫ್ ಹೇರೂರ್, ಬ್ಲಾಕ್ ಪಂಚಾಯತಿ ಉಪಾಧ್ಯಕ್ಷ ಮೊಹಮ್ಮದ್ ಹನೀಫ್. ಪಿ.ಕೆ, ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಫಾನ ಇಕ್ಬಾಲ್, ಗ್ರಾ.ಪಂ. ಸದಸ್ಯ ಅಬ್ದುಲ್ ರೆಹಮಾನ್ ಟಿ.ಎಂ, ಮಂಜೇಶ್ವರ ವಿದ್ಯಾಧಿಕಾರಿ ಜಾರ್ಜ್ ಕ್ರಾಸ್ತಾ. ಸಿ.ಎಚ್, ಮಂಜೇಶ್ವರ ಬಿ.ರ್.ಸಿ. ಯ ಬಿ. ಪಿ. ಸಿ ಸುಮಾದೇವಿ, ಪಿ.ಟಿ.ಎ. ಅಧ್ಯಕ್ಷೆ ಸುಷ್ಮಾ ಮತ್ತು ಶಾಲಾ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳಾದ ಇಸ್ಮಾಯಿಲ್, ಬಿ.ಯಂ ಮುಸ್ತಾಫಾ, ಸುಜಾತಾ ಶೆಟ್ಟಿ ಮೊದಲಾದವರು ಉಪಸ್ಥಿತರಿರುವರು. ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ, ಪಿ.ಟಿ.ಎ. ಅಧ್ಯಕ್ಷ ಇಬ್ರಾಹಿಂ ಹನೀಫಿ, ಹಿರಿಯ ಶಿಕ್ಷಕ ರಿಯಾಸ್ ಪೆರಿಂಗಡಿ ನೇತೃತ್ವ ವಹಿಸುವರು.

