HEALTH TIPS

ಎಡನೀರು ಶಾಲೆಯಲ್ಲಿ ಕನ್ನಡ ಸಾಹಿತ್ಯ ಅಭಿಯಾನ, ಕನ್ನಡ ಪಯಸ್ವಿನಿ ಪ್ರಶಸ್ತಿಪ್ರದಾನ ಸಮಾರಂಭ

ಕಾಸರಗೋಡು: ಪರಂಪರೆಯಿಂದ ಬೆಳೆದುಬಂದಿರುವ ಸಾಹಿತ್ಯ ಪ್ರಕಾರವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಯುವ ತಲೆಮಾರಿನಿಂದ ನಡೆಯಬೇಕಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಕೋಶಾಧಿಕಾರಿ ಪೆÇ್ರ. ಅನಂತ ಪದ್ಮನಾಭ ರಾವ್ ತಿಳಿಸಿದ್ದಾರೆ.

ಅವರು ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ  ಎಡನೀರಿನ ಸ್ವಾಮೀಜೀಸ್ ಪ್ರೌಢಶಾಲೆಯಲ್ಲಿ ಶನಿವಾರ ನಡೆದ  ಏಕದಿನ ಕನ್ನಡ ಸಾಹಿತ್ಯ ಅಭಿಯಾನ 'ಕನ್ನಡದ ನಡಿಗೆ ಶಾಲೆಯ ಕಡೆಗೆ" ಶೈಕ್ಷಣಿಕ  ಶಿಬಿರದ 4ನೇ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಹಿತ್ಯಗಳಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ. ಬೌದ್ಧಿಕ ವಿಕಾಸಕ್ಕೆ ಓದು ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಪಠ್ಯದ ಜತೆಗೆ ಇತರ ಪುಸ್ತಕಗಳ ಓದಿನತ್ತ ಹೆಚ್ಚಿನ ಗಮನಹರಿಸಬೇಕು ಎಂದು ತಿಳಿಸಿದರು. 

ಎಡನೀರು ಶ್ರೀಮಠದ ವ್ಯವಸ್ಥಾಪಕ, ಯಕ್ಷಗಾನ ಕಲಾವಿದ ರಾಜೇಂದ್ರ ಕಲ್ಲೂರಾಯ ಸಮಾರಂಭ ಉದ್ಘಾಟಿಸಿದರು. ಎಡನೀರು ಸ್ವಾಮೀಜೀಸ್ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿಲಕ್ಷ್ಮಿ, ಎಡನೀರು ಸ್ವಾಮೀಜೀಸ್ ಪ್ರೌಢಶಾಲೆಯ ಪಿಟಿಎ ಅಧ್ಯಕ್ಷ  ನಾರಾಯಣನ್, ಧಾರ್ಮಿಕ ಮುಂದಾಳು ಡಾ. ಕೆ.ಎನ್ ವೆಂಕಟ್ರಮಣ ಹೊಳ್ಳ  ಅತಿಥಿಗಳಾಗಿ ಭಾಗವಹಿಸಿದ್ದರು.  ಈ ಸಂದರ್ಭ ಅಕ್ಷರ ಲೋಕದ ಮತ್ತು ಸಾಂಸ್ಕøತಿಕ ಕ್ಷೇತ್ರದ ಸಾಧಕ ರಾಜೇಂದ್ರ ಕಲ್ಲೂರಾಯ ಅವರಿಗೆ ಕನ್ನಡ ಪಯಸ್ವಿನಿ ಪ್ರಶಸ್ತಿ-2025 ಪ್ರದಾನ ಮಾಡಲಾಯಿತು.  ಸಾಹಿತಿ ಶಿಕ್ಷಣ ತಜ್ಞ ವಿ ಬಿ ಕುಳಮರ್ವ,  ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ವಿರಾಜ್ ಅಡೂರು ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.  ಸಂಘಟನೆಯ ಸ್ಥಾಪಕ ಸಂಚಾಲಕ ಡಾ ಕೆ.ವಾಮನ್ ರಾವ್ ಬೇಕಲ್ ಹಾಗೂ ಸಂಘಟನೆಯ ಜಿಲ್ಲಾ ಕೋಶಾಧಿಕಾರಿ ಸಂಧ್ಯಾರಾಣಿ ಟೀಚರ್, ಶಾಲಾ ಶಿಕ್ಷಕ ವೆಂಕಟಕೃಷ್ಣ, ಕನ್ನಡ ಭವನದ  ಕಾರ್ಯದರ್ಶಿ ವಸಂತ ಕೆರೆಮನೆ ಉಪಸ್ಥಿತರಿದ್ದರು.   ಸಂಘಟನಾ ಕಾರ್ಯದರ್ಶಿ ಶಾರದಾ ಮೊಳೆಯಾರ್ ಎಡನೀರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಂಘಟನೆಯ  ಉಪಾಧ್ಯಕ್ಷ ವಿಜಯರಾಜ ಪುಣಿಂಚಿತ್ತಾಯ ಬೆಳ್ಳೂರು ವಂದಿಸಿದರು.  



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries