HEALTH TIPS

ಶ್ರೀಲಂಕಾ | ಭ್ರಷ್ಟಾಚಾರ ಆರೋಪ: ರಾನಿಲ್ ವಿಕ್ರಮ ಸಿಂಘೆಗೆ ಜಾಮೀನು

ಕೊಲಂಬೊ: ಭ್ರಷ್ಟಾಚಾರ ಆರೋಪದಡಿ ಬಂಧನದಲ್ಲಿದ್ದ ಶ್ರೀಲಂಕಾದ ಮಾಜಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರಿಗೆ ಕೊಲಂಬೊ ಪೋರ್ಟ್ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಕೊಲಂಬೊ ನ್ಯಾಷನಲ್ ಆಸ್ಪತ್ರೆಯ ತೀವ್ರ ನೀಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾನಿಲ್ ಅವರು ವರ್ಚುವಲ್ ಆಗಿ ವಿಚಾರಣೆಗೆ ಹಾಜರಾದರು.

ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಡಿ ರಾನಿಲ್ ಅವರನ್ನು ಸಿಐಡಿ ಶುಕ್ರವಾರ ಬಂಧಿಸಿತ್ತು. ಅವರ ಜಾಮೀನು ಅರ್ಜಿ ತಿರಸ್ಕೃರಿಸಿದ್ದ ನ್ಯಾಯಾಲಯ ಮಂಗಳವಾರದವರಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಗ್ಯದಲ್ಲಿ ಏರುಪೇರಾದ ಕಾರಣ ಭಾನುವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದ ಕಾರಣ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries