HEALTH TIPS

ದೆಹಲಿಯಲ್ಲಿ ಧಾರಾಕಾರ ಮಳೆ: ಗೋಡೆ ಕುಸಿದು ಎಂಟು ಮಂದಿ ಸ್ಥಳದಲ್ಲೇ ಸಾವು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜೈತಾಪುರದ ಹರಿನಗರದ ಮೋಹನ್ ಬಾಬಾ ಮಂದಿರ ಬಳಿ ಗೋಡೆ ಕುಸಿದ ಪರಿಣಾಮ ಎಂಟು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಸಂಬಂಧ ಬೆಳಿಗ್ಗೆ 9.16ಕ್ಕೆ ಅಗ್ನಿಶಾಮಕ ಇಲಾಖೆಗೆ ಮಾಹಿತಿ ಬಂದಿತು.

ಕೂಡಲೇ ಮೂರು ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳದಲ್ಲಿ ಪೊಲೀಸರು ಸೇರಿದಂತೆ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ದೆಹಲಿ-ಎನ್‌ಸಿಆರ್‌ನ ಹಲವು ಭಾಗಗಳಲ್ಲಿ ಶುಕ್ರವಾರ ರಾತ್ರಿಯಿಡೀ ಭಾರಿ ಮಳೆಯಾಗಿತ್ತು. ಇಂದು (ಶನಿವಾರ) ಕೂಡಾ ವರುಣಾರ್ಭಟ ಮುಂದುವರಿದಿರುವ ಕಾರಣ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್‌ ಅಲರ್ಟ್‌ ಘೋಷಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries