HEALTH TIPS

ತೈವಾನ್ | 'ರಾಗಸ' ಚಂಡಮಾರುತದ ಅಬ್ಬರ: 14 ಮಂದಿ ಸಾವು, 18 ಜನರಿಗೆ ಗಾಯ

 ಹಾಂಗ್ ಕಾಂಗ್: ತೈವಾನ್‌ನಲ್ಲಿ 'ರಾಗಸ' ಚಂಡಮಾರುತ ಅವಾಂತರ ಸೃಷ್ಟಿಸಿದೆ. ಸರೋವರದ ತಡೆಗೋಡೆ ಒಡೆದು 14 ಮಂದಿ ಮೃತಪಟ್ಟಿದ್ದು, 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂಡಮಾರುತದ ಪರಿಣಾಮ ದಕ್ಷಿಣ ತೈವಾನ್‌ನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಕಡಲತೀರದಲ್ಲಿ ಪ್ರವಾಹದಿಂದಾಗಿ ನೂರಾರು ಮರಗಳು ಧರೆಗುರುಳಿವೆ. 


ಹಲವು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ರಾಗಸ' ಚಂಡಮಾರುತ ಮಂಗಳವಾರ ದಕ್ಷಿಣ ಚೀನಾಕ್ಕೆ ಅಪ್ಪಳಿಸಿದೆ. ಇದರಿಂದಾಗಿ ಹಲವೆಡೆ ವ್ಯಾಪಕ ಮಳೆ ಸುರಿಯುತ್ತಿದೆ.

ಚಂಡಮಾರುತ ಬುಧವಾರ ಹಾಂಗ್ ಕಾಂಗ್‌ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ವಿವಿಧೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಚೀನಾದ ದಕ್ಷಿಣ ಭಾಗದ ಕನಿಷ್ಠ 10 ನಗರಗಳಲ್ಲಿ ಕಚೇರಿಗಳು ಮತ್ತು ಶಾಲೆಗಳನ್ನು ಮುಚ್ಚುವಂತೆ ಅಧಿಕಾರಿಗಳು ಆದೇಶಿಸಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ಸೇರಿದಂತೆ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರಿದೆ ಎಂದು ಮೂಲಗಳು ತಿಳಿಸಿವೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries