HEALTH TIPS

ಕೇರಳದಿಂದ ಆರಂಭವಾದ ನೈರುತ್ಯ ಮುಂಗಾರು ರಾಜಸ್ಥಾನದಲ್ಲಿ ಸೆ. 15ರಿಂದ ಹಿಂದಕ್ಕೆ:IMD

ನವದೆಹಲಿ: ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ದೇಶದ ವಾಯವ್ಯ ಭಾಗದಲ್ಲಿ ಸೆ. 15ರಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)  ತಿಳಿಸಿದೆ.

ದೇಶಕ್ಕೆ ಮೊದಲ ಮಳೆ ಸುರಿಸುವ ಮಾರುತವು ಜೂನ್‌ 1ಕ್ಕೆ ಕೇರಳ ಪ್ರವೇಶಿಸಿ, ಜುಲೈ 8ಕ್ಕೆ ಇಡೀ ದೇಶವನ್ನು ವ್ಯಾಪಿಸಿತ್ತು.

ಸೆ. 17ಕ್ಕೆ ವಾಯವ್ಯ ಭಾಗದಿಂದ ನೈರುತ್ಯ ಮುಂಗಾರು ಹಿಂದೆ ಸರಿಯಲು ಆರಂಭಿಸಲಿದೆ. ಅ. 15ಕ್ಕೆ ಕೊನೆಗೊಳ್ಳಲಿದೆ' ಎಂದು ಇಲಾಖೆ ತಿಳಿಸಿದೆ.

'ಸೆ. 15ರಿಂದ ನೈರುತ್ಯ ಮುಂಗಾರು ಹಿಂದಕ್ಕೆ ಸರಿಯಲು ರಾಜಸ್ಥಾನದ ಪಶ್ಚಿಮದ ಕೆಲ ಭಾಗಗಳಲ್ಲಿನ ಪರಿಸ್ಥಿತಿ ಅನುಕೂಲಕರವಾಗಿದೆ. ಈ ವರ್ಷ ವಾಡಿಕೆಗಿಂತ ಒಂಬತ್ತು ದಿನ ಮೊದಲೇ ಮುಂಗಾರು ಇಡೀ ದೇಶವನ್ನು ಆವರಿಸಿತು. 2020ರಲ್ಲಿ ಜೂನ್ 26ರಂದೇ ಮುಂಗಾರು ಇಡೀ ದೇಶವನ್ನು ಆವರಿಸಿತ್ತು. ಅದಾದ ನಂತರ ವಾಡಿಕೆಗಿಂತ ಮೊದಲು ಮಳೆಯಾಗಿದ್ದು 2025ರಲ್ಲೇ' ಎಂದು ಇಲಾಖೆ ಹೇಳಿದೆ.

ಮುಂಗಾರು ಋತುವಿನಲ್ಲಿ ಈವರೆಗೂ 83.62 ಸೆಂ.ಮೀ. ಮಳೆಯಾಗಿದ್ದು, ಇದು ವಾಡಿಕೆಗಿಂತ (77.86 ಸೆಂ.ಮೀ.) ಶೇ 7ರಷ್ಟು ಅಧಿಕವಾಗಿದೆ. ಜೂನ್‌ನಿಂದ ಸೆಪ್ಟೆಂಬರವವರೆಗೂ ಮಾನ್ಸೂನ್ ಆರಂಭಕ್ಕೂ ಮೊದಲು ಮೇನಲ್ಲಿ ಮಳೆಯ ಮುನ್ಸೂಚನೆ ನೀಡಿದ್ದ ಹವಾಮಾನ ಇಲಾಖೆಯು, 2025ರಲ್ಲಿ ದೀರ್ಘಾವಧಿಯ ಸರಾಸರಿ 87 ಸೆಂ.ಮೀ. (ಶೇ 16ರಷ್ಟು ಅಧಿಕ) ಮಳೆಯಾಗಲಿದೆ ಎಂದಿತ್ತು.

50 ವರ್ಷಗಳ ಸರಾಸರಿ ಮಳೆಯ ಪ್ರಮಾಣವನ್ನು ಆಧರಿಸಿ ಶೇ 90ರಿಂದ ಶೇ 104ರಷ್ಟು ಮಳೆಯನ್ನು ಸಾಮಾನ್ಯ ಎಂದು ಪರಿಗಣಿಸಲಾಗುತ್ತದೆ. ದೇಶದ ಕೃಷಿ ವಲಯಕ್ಕೆ ಮಾನ್ಸೂನ್ ನಿರ್ಣಾಯಕವಾಗಿದ್ದು, ಇದು ಸುಮಾರು ಶೇ 42ರಷ್ಟು ಜನರ ಜೀವನೋಪಾಯದ ಆಧಾರವಾಗಿದೆ. ಜತೆಗೆ ದೇಶದ ಜಿಡಿಪಿಗೆ ಶೇ 18.2ರಷ್ಟು ಕೊಡುಗೆ ನೀಡುತ್ತದೆ.

ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಗೆ ಅಗತ್ಯವಾದ ಜಲಾಶಯಗಳನ್ನು ಮರುಪೂರಣಗೊಳಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries