ಬದಿಯಡ್ಕ : ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಅಂಗ ಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಯುವ ಏಕದಿನ ಕನ್ನಡ ಸಾಹಿತ್ಯ ಅಭಿಯಾನವಾದ, 'ಕನ್ನಡದ ನಡಿಗೆ ಶಾಲೆಯ ಕಡೆಗೆ" ಶೈಕ್ಷಣಿಕ ಶಿಬಿರದ 6ನೇ ಕಾರ್ಯಕ್ರಮವು 2025 ಸೆ. 20 ರಂದು ಬೆಳಗ್ಗೆ 9.30 ರಿಂದ ಬೇಳ ಸಂತ ಃಚಿರ್ತಲೋಮೆಯ ಹಿರಿಯ ಬುನಾದಿ ಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಶಾಲೆಯ ಸಂಚಾಲಕಿ ಸಿಸ್ಟರ್ ಮಾರ್ಸೆಲಿನ್ ಬ್ರಾಗ್ಸ್ ಉದ್ಘಾಟಿಸುವರು. ಮುಖ್ಯ ಶಿಕ್ಷಕಿ ಸಿಸ್ಟರ್ ಎಲಿಜಬೆತ್ ಪಿ. ಎ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಪಿಟಿಎ ಅಧ್ಯಕ್ಷ ಶಂಕರ ಡಿ. ಹಾಗೂ ಎಂಪಿಟಿಎ ಅಧ್ಯಕ್ಷೆ ಸರಿತಾ ಶುಭ ಹಾರೈಸುವರು. ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ, ಪರಿಷತ್ತಿನ ಸ್ಥಾಪಕ ಸಂಚಾಲಕ ಡಾ. ಕೆ ವಾಮನ್ ರಾವ್ ಬೇಕಲ್ ಪ್ರಾಸ್ತಾವಿಕವಾಗಿ ಮಾತನಾಡುವರು. ನಿವೃತ್ತ ಶಿಕ್ಷಕಿ ಸಂಧ್ಯಾರಾಣಿ ಟೀಚರ್, ಕಾಸರಗೋಡಿನ ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ ಉಪಸ್ಥಿತರಿರುವರು. ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕವನ ರಚನೆಯಲ್ಲಿ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ, ಸಾಹಿತಿ ಡಾ. ಕೊಳಚಪ್ಪೆ ಗೋವಿಂದ ಭಟ್ ಹಾಗೂ ಚಿತ್ರ ರಚನೆಯಲ್ಲಿ ಚಿತ್ರಕಲಾ ಶಿಕ್ಷಕ ಮೋಹನದಾಸ್ ಅನ್ನೆಪಲ್ಲಡ್ಕ ಭಾಗವಹಿಸುವರು. ಶಿಕ್ಷಕ ಸ್ಟೇನಿ ಲೋಬೋ, ನಿವೃತ್ತ ಶಿಕ್ಷಕಿ ಶಶಿಕಲಾ ಟೀಚರ್ ಕುಂಬಳೆ, ಶಾಲಾ ವಿದ್ಯಾರ್ಥಿನಿಯರಾದ ಮಂಜೂಷಾ ಪಿ, ಶ್ರೇಯಾ ಬಿ, ಅದ್ವಿತೀಯ ರಾಮಚಂದ್ರ ಮೊದಲಾದವರು ಸಹಕರಿಸುವರು.





