ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಎ.ಯು.ಪಿ ಶಾಲೆಯ ಸಂಚಾಲಕರಾಗಿ, ಅಧ್ಯಾಪಕರಾಗಿ ಮೀಂಜ ಪ್ರದೇಶದ ವಿದ್ಯಾಭ್ಯಾಸ ಕ್ಷೇತ್ರದ ದ್ರುವತಾರೆಯೆನಿಸಿಕೊಂಡ ದಿ.ಯಂ ರಾಮಕೃಷ್ಣ ರಾವ್ ಅವರ 20 ನೇ ಪುಣ್ಯತಿಥಿ ಶನಿವಾರ ಸಂಸ್ಮರಣೆ ಮತ್ತು ಸನ್ಮಾನ ಕಾರ್ಯಕ್ರಮಗಳೊಂದಿಗೆ ಶಾಲಾ ಸಭಾಂಗಣದಲ್ಲಿ ಜರಗಿತು.
ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಜಾರ್ಜ್ ಕ್ರಾಸ್ತಾ ಸಿ.ಎಚ್.ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ಆಡಳಿತ ಸಲಹೆಗಾರ ಶ್ರೀಧರ್ ರಾವ್ ಆರ್.ಎಂ. ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಮನೋ ವೈದ್ಯ ಹಾಗೂ ಶ್ರೀ ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮ ಇದರ ಅಧ್ಯಕ್ಷ ಡಾ.ಕೆ.ಎಸ್. ಕಾರಂತಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಹಿತನುಡಿಗಳನ್ನಾಡಿದರು. ಇದೇ ಸಂದರ್ಭದಲ್ಲಿ ಶಾಲಾ ಹೆಮ್ಮೆಯ ಪೂರ್ವ ವಿದ್ಯಾರ್ಥಿ, ರಾಜ್ಯ ವಿದ್ಯಾಭ್ಯಾಸ ಇಲಾಖೆಯ ಯೋಜನಾಧಿಕಾರಿ ಇಬ್ರಾಹಿಂ ಬಿ, ಹಾಗೂ ಉದ್ಯಮಿ ಬಿ. ಕಿಶೋರ್ ಕುಮಾರ್ ರೈ ಅವರನ್ನು ಗಣ್ಯರ ಸಮಕ್ಷಮದಲ್ಲಿ ಗೌರವಿಸಲಾಯಿತು. ಸನ್ಮಾನಿತರು ತಮ್ಮ ಶಾಲಾ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡರು. ಶಾಲಾ ಸಂಚಾಲಕಿ ರಾಜೇಶ್ವರಿ ಎಸ್. ರಾವ್ ಉಪಸ್ಥಿತರಿದ್ದರು. ಅಧ್ಯಾಪಕರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಹಾಗೂ ಹೇಮಮಾಲಿನಿ ಟೀಚರ್ ನಿರ್ವಹಿಸಿದರು.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಶಾಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಂದ ವೀರ ಚಂದ್ರಹಾಸ ಪೌರಾಣಿಕ ನಾಟಕ ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಅಧ್ಯಾಪಕರಾದ ವಿಘ್ನೇಶ್ ಎಸ್. ನಿರೂಪಿಸಿದರು. ಮುಖ್ಯ ಶಿಕ್ಷಕ ಅರವಿಂದಾಕ್ಷ ಭಂಡಾರಿ ವಂದಿಸಿದರು.




.jpg)
