HEALTH TIPS

ಪ್ರವಾಹ ಸಂತ್ರಸ್ತರಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಿಂದ ತಲಾ₹25 ಸಾವಿರ ದೇಣಿಗೆ

ನವದೆಹಲಿ: ಸಿಜೆಐ ಬಿ.ಆರ್‌.ಗವಾಯಿ ಮತ್ತು ಸುಪ್ರೀಂ ಕೋರ್ಟ್‌ನ ಇತರೆ ನ್ಯಾಯಮೂರ್ತಿಗಳು ಪ್ರಧಾನ ಮಂತ್ರಿ ಪ್ರವಾಹ ಪರಿಹಾರ ನಿಧಿಗೆ ತಲಾ ₹25 ಸಾವಿರ ದೇಣಿಗೆ ನೀಡಿದ್ದಾರೆ. 

'ದೇಶದ ವಿವಿಧ ಭಾಗಗಳಲ್ಲಿ ಪ್ರವಾಹದಿಂದ ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಮತ್ತು ದೇಶ ಸೇವೆಯಲ್ಲಿ ನ್ಯಾಯಾಂಗದ ಬದ್ಧತೆಯು ಅಚಲವಾಗಿದೆ' ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

'ಪ್ರವಾಹ ಪರಿಹಾರ, ಪುನಶ್ಚೇತನ ಕಾರ್ಯಗಳು ತ್ವರಿತವಾಗಿ ನಡೆದು, ಸಂಕಷ್ಟಕ್ಕೆ ಸಿಲುಕಿರುವ ಜನರ ಜೀವನವು ಆದಷ್ಟು ಬೇಗ ಸಹಜ ಸ್ಥಿತಿಗೆ ಮರಳಲಿ' ಎಂದು ಸಿಜೆಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries