HEALTH TIPS

ಮಹಾರಾಷ್ಟ್ರ: ಒಂದೇ ದಿನದಲ್ಲಿ 67 ಮಂದಿಗೆ ನಾಯಿ ಕಡಿತ

ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಕಲ್ಯಾಣ ಮತ್ತು ಡೊಂಬಿವ್ಲಿ ಪ್ರದೇಶದ ವ್ಯಾಪ್ತಿಯಲ್ಲಿ ಒಂದೇ ದಿನದಲ್ಲಿ 67 ಮಂದಿ ಬೀದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ಇದು ಇಲ್ಲಿನ ನಿವಾಸಿಗಳಲ್ಲಿ ಆತಂಕವನ್ನುಂಟುಮಾಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಕಳೆದ ಕೆಲವು ವಾರಗಳಿಂದ, ಈ ಪ್ರದೇಶದಲ್ಲಿ ನಾಯಿ ಕಡಿತದ ಘಟನೆಗಳು ವಿರಳವಾಗಿ ಸಂಭವಿಸುತ್ತಿದ್ದವು. ಆದರೆ ಶನಿವಾರ ಕಲ್ಯಾಣ ಮತ್ತು ಡೊಂಬಿವ್ಲಿ ಪಟ್ಟಣಗಳಲ್ಲಿ ಒಟ್ಟು 67 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಅಧಿಕಾರಿ ಡಾ. ದೀಪಾ ಶುಕ್ಲಾ ತಿಳಿಸಿದ್ದಾರೆ.

ಕಲ್ಯಾಣ, ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಕೆಡಿಎಂಸಿ) ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಈ ಘಟನೆಗಳಿಗೆ ಕಾರಣವಾಗಿದೆ. ನಾಯಿ ಕಡಿತಕ್ಕೆ ಒಳಗಾದವರಿಗೆ ರೇಬೀಸ್ ನಿರೋಧಕ ಲಸಿಕೆ ಸೇರಿದಂತೆ ಸೂಕ್ತ ಚಿಕಿತ್ಸೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಕೆಡಿಎಂಸಿ ನಿಯಮಿತವಾಗಿ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸುತ್ತಿದೆ. ಪ್ರತಿ ತಿಂಗಳು 1,000 ರಿಂದ 1,100 ನಾಯಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದೂ ಅವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries