HEALTH TIPS

ಮಹಾರಾಷ್ಟ್ರದಲ್ಲಿ ಭಾರಿ ಮಳೆ: 8 ಮಂದಿ ಸಾವು, ಅಪಾರ ಪ್ರಮಾಣದ ಕೃಷಿ ಭೂಮಿ ನಾಶ

ಮುಂಬೈ: ಮಹಾರಾಷ್ಟ್ರದಲ್ಲಿ ಸುರಿದ ಅಕಾಲಿಕ ಮಳೆಯಿಂದ ಉಂಟಾದ ವಿವಿಧ ಅವಘಡಗಳಲ್ಲಿ 8 ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಹಲವು ಮನೆಗಳು ಹಾನಿಗೊಂಡಿದ್ದು, ಬೆಳೆಗಳು ಕೊಚ್ಚಿ ಹೋಗಿವೆ. ಅಪಾರ ಪ್ರಮಾಣದ ಕೃಷಿಭೂಮಿ ನಾಶವಾಗಿದೆ.

ಕಳೆದ ಎರಡು ದಿನಗಳಲ್ಲಿ 5,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಈ ಮೊದಲೇ ಕೃಷಿ ಭೂಮಿ ಹಾನಿಗೊಳಗಾಗಿದ್ದ ಮರಾಠವಾಡ ಪ್ರದೇಶವು ಮಳೆಯಿಂದ ಇನ್ನಷ್ಟು ಸಂಕಷ್ಟಕ್ಕೀಡಾಗಿದೆ.

ಭಾರಿ ಮಳೆಯಿಂದಾಗಿ ಹಲವಯ ಅಣೆಕಟ್ಟೆಗಳಲ್ಲಿ ನೀರಿನ ಮಟ್ಟವು ಭರ್ತಿ ಹಂತಕ್ಕೆ ತಲುಪಿದೆ.

ಹಾನಿಗೊಳಗಾಗಿರುವ ಪ್ರತಿ ಹೆಕ್ಟೇರ್‌ ಕೃಷಿ ಭೂಮಿಗೆ ₹50,000 ಪರಿಹಾರ ಘೋಷಿಸುವಂತೆ ವಿಪಕ್ಷ ಮಹಾ ವಿಕಾಸ ಅಘಾಡಿ ಕೇಳಿದೆ.

- ಸ್ಥಳದಲ್ಲಿರುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಶಿಬಿರಗಳಲ್ಲಿರುವ ಜನರಿಗೆ ಆಹಾರ ಮತ್ತು ನೀರಿನ ಪೂರೈಕೆ ವ್ಯವಸ್ಥೆ ಮಾಡುತ್ತಿದ್ದೇವೆ. ರೇಷನ್‌ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಮೇವಿನ ಕೊರತೆ ಉಂಟಾಗಿರುವ ಹಲವು ಜಿಲ್ಲೆಗಳಿಗೆ ಮೇವಿನ ಪೂರೈಕೆ ಮಾಡುವಂತೆಯೂ ಆದೇಶಿಸಲಾಗಿದೆ.

-ದೇವೇಂದ್ರ ಫಡಣವೀಸ್‌, ಮಹಾರಾಷ್ಟ್ರ ಮುಖ್ಯಮಂತ್ರಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries