HEALTH TIPS

ಶೌಚಾಲಯ ಹುಡುಕಿ ಕಾಕ್‌ಪಿಟ್ ಬಳಿ ತೆರಳಿದ ಪ್ರಯಾಣಿಕ: Air India ವಿಮಾನದಲ್ಲಿ ಘಟನೆ

ಬೆಂಗಳೂರು: ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣ ಮಧ್ಯೆ ಭದ್ರತಾ ಭೀತಿ ಎದುರಾದ ಘಟನೆ ಇಂದು (ಸೆಪ್ಟೆಂಬರ್ 22) ನಡೆದಿದೆ. ಪ್ರಯಾಣಿಕರೊಬ್ಬರು ಶೌಚಾಲಯ ಹುಡುಕಿಕೊಂಡು ಕಾಕ್‌ಪಿಟ್‌ ಬಳಿ ತೆರಳಿದ್ದಾರೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ವಿಸ್ತರಣೆ ಶೀಘ್ರ ಆರಂಭ

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -2ರಿಂದ ಬೆಳಿಗ್ಗೆ 8 ಗಂಟೆಗೆ ಟೇಕಾಫ್ ಆದ 'IX 1086' ವಿಮಾನವು 10.27ಕ್ಕೆ ವಾರಾಣಸಿಯಲ್ಲಿ ಲ್ಯಾಂಡ್ ಆಗಿತ್ತು.

ಪ್ರಯಾಣ ಮಧ್ಯೆ ಪ್ರಯಾಣಿಕ ಶೌಚಾಲಯವನ್ನು ಹುಡುಕಿಕೊಂಡು ಕಾಕ್‌ಪಿಟ್ ಬಳಿ ತೆರಳಿದ್ದಾರೆ. ಆದರೆ ಅಪಹರಣದ ಪ್ರಯತ್ನವಾಗಿರಬಹುದೆಂದು ಶಂಕಿಸಿ ಪೈಲಟ್ ಬಾಗಿಲು ತೆರೆಯಲಿಲ್ಲ ಎಂದು ಮೂಲಗಳು ತಿಳಿಸಿವೆ.

ಘಟನೆ ನಡೆದಿರುವ ಬಗ್ಗೆ ಏರ್‌ಲೈನ್ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಖಚಿತ ಪಡಿಸಿದ್ದು, ಸುರಕ್ಷತೆ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ಹೇಳಿದೆ. ಈ ಬಗ್ಗೆ ಲ್ಯಾಂಡ್ ಆದ ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಏರ್ ಇಂಡಿಯಾ ವಕ್ತಾರ ತಿಳಿಸಿದ್ದಾರೆ.

ಇದು ಪ್ರಮಾದವಾಶತ್ ಅದ ಘಟನೆಯೇ ಅಥವಾ ಭದ್ರತಾ ಉಲ್ಲಂಘನೆ ಯತ್ನವೇ ಎನ್ನುವ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries