HEALTH TIPS

ಸಿಎಂ, ಸಚಿವರನ್ನು 'ಗೌರವಾನ್ವಿತ' ಎಂದು ಸಂಬೋಧಿಸಿ: ಕೇರಳ ಸರ್ಕಾರ ಸುತ್ತೋಲೆ

ತಿರುವನಂತಪುರಂ: ಸಾರ್ವಜನಿಕರ ದೂರು ಅಥವಾ ಅರ್ಜಿಗಳಿಗೆ ಉತ್ತರಿಸುವಾಗ ಮುಖ್ಯಮಂತ್ರಿ, ಸಚಿವರ ಹೆಸರಿನ ಮುಂದೆ 'ಗೌರವಾನ್ವಿತ' ಎನ್ನುವ ಪದ ಬಳಸಬೇಕು ಎಂದು ಕೇರಳ ಸರ್ಕಾರದ ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ಈ ಬಗ್ಗೆ ಆಗಸ್ಟ್ 30ರಂದು ಸುತ್ತೋಲೆ ಹೊರಡಿಸಲಾಗಿದ್ದು, ದೂರುಗಳಿಗೆ ನೀಡುವ ಉತ್ತರದಲ್ಲಿ ಮುಖ್ಯಮಂತ್ರಿ ಅಥವಾ ಸಚಿವರ ಹೆಸರಿನ ಮುಂದೆ 'ಬಹುಮಾನಪೆಟ್ಟ' (ಗೌರವಾನ್ವಿತ) ಎಂದು ಬಳಸಬೇಕು ಎಂದು ಇಲಾಖೆಯ ಕಾರ್ಯದರ್ಶಿಗಳಿಗೆ, ಜಿಲ್ಲಾಧಿಕಾರಿಗಳಿಗೆ ಹಾಗೂ ಕಚೇರಿಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

ಉತ್ತರಗಳನ್ನು ಬರೆಯುವಾಗ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕ್ರಮ ಎದುರಿಸಬೇಕಾದೀತು ಎಂದೂ ಎಚ್ಚರಿಕೆ ನೀಡಲಾಗಿದೆ.

‌ಅಧಿಕೃತ ಸಂವಹನದಲ್ಲಿ ಗೌರವದಿಂದ ಸಂಬೋಧಿಸುವ ಸಂಪ್ರದಾಯ ಕಡಿಮೆಯಾಗುತ್ತಿದೆ ಎನ್ನುವ ಅಭಿಪ್ರಾಯಗಳು ದೇಶದಾದ್ಯಂತ ಕೇಳಿ ಬರುತ್ತಿರುವಾಗಲೇ, ಕೇರಳ ಸರ್ಕಾರದಿಂದ ಈ ನಡೆ ಬಂದಿದೆ.

ಆಡಳಿತ ಸುಧಾರಣಾ ಇಲಾಖೆಯು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ, ಈ ಸುತ್ತೋಲೆಯು ಅವರ ಸೂಚನೆಗಳನ್ನು ಪ್ರತಿಬಿಂಬಿಸುತ್ತದೆ ಎನ್ನಲಾಗಿದೆ. ಆದರೆ ಸರ್ಕಾರ ಈ ನಿರ್ಧಾರದ ಹಿಂದಿನ ಕಾರಣ ತಿಳಿಸಿಲ್ಲ.

ಸರ್ಕಾರದ ಈ ಸುತ್ತೋಲೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries